ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಆಡಳಿತ ಪಾಠ ಮಾಡಿದರು.
ಸಭೆಯಲ್ಲಿ, ಅತಿವೃಷ್ಟಿಯಿಂದ ಬೆಳೆಹಾನಿ,ಮನೆಗಳ ಹಾನಿ ಬಗ್ಗೆ ಪರಾಮರ್ಶೆ ನಡೆಸಲಾಯಿತು.ಜನರ ಸೇವೆ ಮಾಡುವ ಪಬ್ಲಿಕ್ ಸರ್ವೆಂಟ್ಸ್ ಜಿಲ್ಲೆಗಳಲ್ಲಿ ಅಧಿಕಾರ ಇದೆ ಎನ್ನುವುದನ್ನು ಬಿಟ್ಟು ಜನರ ಕೆಲಸ ಮಾಡಿ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂದುಕೊಂಡು ಫೀಲ್ಡಿನಲ್ಲೂ ಅದೇ ಥರ ಕೆಲಸ ಮಾಡಬೇಡಿ. ಜನರ ನಡುವೆ ಹೋಗಿ ಜನರ ಜತೆ ಕೆಲಸ ಮಾಡಿ. ಕೆಳಹಂತದ ಅಧಿಕಾರಿಗಳು ಡಿಸಿಗಳಂತೆ ವರ್ತಿಸಲು ಅವಕಾಶ ಕೊಡಬೇಡಿ. ನಿಮ್ಮಸ್ವಂತಿಕೆ, ವಿವೇಚನೆ ಬಳಸಿ ಕೆಲಸ ಮಾಡಿ. ಅಧಿಕಾರ ನಿಮ್ಮಲ್ಲಿ ಇದ್ದಾಗ ಇನ್ನಷ್ಟು ಮೃದುತ್ವ, ವಿನಯತೆ ತರಬೇಕು. ಎಚ್ಚರಿಕೆಯಿಂದ ಆಡಳಿತದ ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.
ಬೆಳೆಗಳ ಹಾನಿ,ಮನೆಗಳ ಹಾನಿಗೆ ಪರಿಹಾರ ಕೊಡದ ಡಿಸಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಸಿಎಂ, ಕೆಲಸ ಆಗಲಿಲ್ಲ ಅಂತ ಕೆಳಗಿನ ಅಧಿಕಾರಿಗಳ ಮೇಲೆ ಹಾಕಬೇಡಿ. ಕೆಲಸಗಳು ಆಗದಿರುವುದಕ್ಕೆ ನೀವೇ ಹೊಣೆ, ನಿಮ್ಮದೆ ಹೊಣೆಗಾರಿಕೆ ಎಂದು ಸಭೆಯಲ್ಲಿ ಡಿಸಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡರು.
ಕಂದಾಯ ಸಚಿವ ಆರ್. ಅಶೋಕ್, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…