ಬಾಗಲಕೋಟೆ/ಬೆಳಗಾವಿ: ‘ಸೆಪ್ಟೆಂಬರ್ 12ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಕೇಂದ್ರದಿಂದ ಹೆಚ್ಚಿನ ನೆರವು ಕೋರಲಿದ್ದೇನೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ಸಾಲ ತಂದಾದರೂ ನೆರವಾಗುತ್ತೇನೆ. ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಆಲಮಟ್ಟಿಯಲ್ಲಿ ಮಂಗಳವಾರ ಕೃಷ್ಣೆಗೆ ಬಾಗಿನ ಅರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕೋವಿಡ್ ಕಾರಣದಿಂದ ರಾಜ್ಯ ಹಾಗೂ ಕೇಂದ್ರದ ಹಣಕಾಸಿನ ಸ್ಥಿತಿ ಸರಿ ಇಲ್ಲ. ಅಂತಹ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತಿದ್ದೇನೆ. ಜಿಎಸ್ಟಿಗೆ ಸಂಬಂಧಿಸಿದಂತೆ ರಾಜ್ಯದ ಪಾಲಿನ ₹13 ಸಾವಿರ ಕೋಟಿ ಪಡೆಯಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದೇನೆ. ಆಗಸ್ಟ್ 27ರಂದು ನಡೆಯಲಿರುವ ಜಿಎಸ್ಟಿ ಮಂಡಳಿ ಸಭೆಯಲ್ಲಿ ಆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತಿದೆ. 2–3 ತಿಂಗಳಲ್ಲಿ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯೂ ಕಾಣಬಹುದು’ ಎಂಬ ಆಶಾಭಾವ ವ್ಯಕ್ತಪಡಿಸಿದರು.
‘ಕೋವಿಡ್ ಚಿಕಿತ್ಸೆಗೆ ಔಷಧ ಖರೀದಿ ವಿಚಾರದಲ್ಲಿ ವಿರೋಧ ಪಕ್ಷದವರ ಆಗ್ರಹದಂತೆ ಶ್ವೇತಪತ್ರ ಹೊರಡಿಸುವ ಅಗತ್ಯವಿಲ್ಲ. ಮುಂಬರುವ ಅಧಿವೇಶನದಲ್ಲಿ ಅವರ ಎಲ್ಲ ಆರೋಪಗಳಿಗೂ ಸಮರ್ಥ ಉತ್ತರ ನೀಡಲಾಗುವುದು’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…