ಬಾಗಲಕೋಟೆ/ಬೆಳಗಾವಿ: ‘ಸೆಪ್ಟೆಂಬರ್ 12ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಕೇಂದ್ರದಿಂದ ಹೆಚ್ಚಿನ ನೆರವು ಕೋರಲಿದ್ದೇನೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ಸಾಲ ತಂದಾದರೂ ನೆರವಾಗುತ್ತೇನೆ. ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಆಲಮಟ್ಟಿಯಲ್ಲಿ ಮಂಗಳವಾರ ಕೃಷ್ಣೆಗೆ ಬಾಗಿನ ಅರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕೋವಿಡ್ ಕಾರಣದಿಂದ ರಾಜ್ಯ ಹಾಗೂ ಕೇಂದ್ರದ ಹಣಕಾಸಿನ ಸ್ಥಿತಿ ಸರಿ ಇಲ್ಲ. ಅಂತಹ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತಿದ್ದೇನೆ. ಜಿಎಸ್ಟಿಗೆ ಸಂಬಂಧಿಸಿದಂತೆ ರಾಜ್ಯದ ಪಾಲಿನ ₹13 ಸಾವಿರ ಕೋಟಿ ಪಡೆಯಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದೇನೆ. ಆಗಸ್ಟ್ 27ರಂದು ನಡೆಯಲಿರುವ ಜಿಎಸ್ಟಿ ಮಂಡಳಿ ಸಭೆಯಲ್ಲಿ ಆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತಿದೆ. 2–3 ತಿಂಗಳಲ್ಲಿ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯೂ ಕಾಣಬಹುದು’ ಎಂಬ ಆಶಾಭಾವ ವ್ಯಕ್ತಪಡಿಸಿದರು.
‘ಕೋವಿಡ್ ಚಿಕಿತ್ಸೆಗೆ ಔಷಧ ಖರೀದಿ ವಿಚಾರದಲ್ಲಿ ವಿರೋಧ ಪಕ್ಷದವರ ಆಗ್ರಹದಂತೆ ಶ್ವೇತಪತ್ರ ಹೊರಡಿಸುವ ಅಗತ್ಯವಿಲ್ಲ. ಮುಂಬರುವ ಅಧಿವೇಶನದಲ್ಲಿ ಅವರ ಎಲ್ಲ ಆರೋಪಗಳಿಗೂ ಸಮರ್ಥ ಉತ್ತರ ನೀಡಲಾಗುವುದು’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…