Featured

ಬೆಳ್ತಂಗಡಿ:ಅಪರಿಚಿತ ಸಾವುಗಳ ತನಿಖೆಗೆ ಒತ್ತಾಯಿಸಿ  S I T ಕಚೇರಿಗೆ ತೆರಳಿ ದೂರು ನೀಡಿದ ಮಹೇಶ ಶೆಟ್ಟಿ ತಿಮರೋಡಿ – vishwanews24

ಬೆಳ್ತಂಗಡಿ:ಅಪರಿಚಿತ ಸಾವುಗಳ ತನಿಖೆಗೆ ಒತ್ತಾಯಿಸಿ  S I T ಕಚೇರಿಗೆ ತೆರಳಿ ದೂರು ನೀಡಿದ ಮಹೇಶ ಶೆಟ್ಟಿ ತಿಮರೋಡಿ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸು ವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಮಹೇಶ್ ಶೆಟ್ಟಿ ಭೇಟಿ ನೀಡಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು ಆಧರಿಸಿ ಈ ದೂರನ್ನು ನೀಡಿದ್ದಾರೆ. ಇದರೊಂದಿಗೆ ಮಾಹಿತಿ ಹಕ್ಕಿನಲ್ಲಿ ಪಡೆದಿದ್ದ ದಾಖಲೆಗಳನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಮಹೇಶ್ ಶೆಟ್ಟಿ ತಿಮರೋಡಿ ನೀಡಿರುವ ದೂರಿನಲ್ಲಿ ಗಾಯತ್ರಿ, ಶಾರಾವತಿ ಮತ್ತು ವೈಶಾಲಿ ವಸತಿ ಗೃಹಗಳಲ್ಲಿ ನಡೆದ ನಾಲ್ಕು ಸಾವುಗಳನ್ನು ಪ್ರಸ್ತಾಪಿಸಲಾಗಿದ್ದು, ಇವುಗಳನ್ನು “ಅಪರಿಚಿತ ಶವಗಳೆಂದು ಘೋಷಿಸಿ ಗ್ರಾಮ ಪಂಚಾಯತ್ ಮೂಲಕ ತರಾತುರಿಯಲ್ಲಿ ಸಮಾಧಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣಗಳಲ್ಲಿ ಕೇವಲ UDR (ಅಸ್ವಾಭಾವಿಕ ಮರಣ ವರದಿ) ದಾಖಲಿಸಲಾಗಿದ್ದು, ಕೊಲೆ ಅಥವಾ ಆತ್ಮಹತ್ಯೆಯ ಸಂಶಯವಿದ್ದರೂ ಎಫ್.ಐ‌.ಆರ್ ದಾಖಲಿಸದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

2 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

2 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

2 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago