ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ.
ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಸಂತ ಬಂಗೇರ, ನಗರ ಬ್ಲಾಕ್ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಂಜನ್ ಜಿ. ಗೌಡ ಮತ್ತಿತರ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…