ಬೆಳ್ತಂಗಡಿ: ಹಳೆ ರಸ್ತೆ ವನ ಎಂಬಲ್ಲಿ ಇಬ್ಬರು ಗೆಳೆಯರು ಕಾಲೇಜಿಗೆ ಮಧ್ಯಾಹ್ನದ ವರೆಗೆ ರಜೆ ಇದ್ದ ಕಾರಣ ಸೋಮಾವತಿ ನದಿಯಲ್ಲಿ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಒಬ್ಬ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೂಲತಃ ಚಿಕ್ಕಮಗಳೂರು ಮೂಲದ ಸಮರ್ಥ್(18) ಸಾವನ್ನಪ್ಪಿದ ಯುವಕ.
ಸಮರ್ಥ್, ಬೆಳ್ತಂಗಡಿ ಮೆಸ್ ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು ಇಂದು ಮಧ್ಯಾಹ್ನದ ನಂತರ ಗೆಳೆಯನ ಜೊತೆ ನದಿಗೆ ಸ್ನಾನ ಮಾಡಲು ತೆರಳಿದ್ದಾನೆ. ಗೆಳೆಯ ಪಕ್ಕದಲ್ಲಿಯೇ ಇದ್ದು ಸಮರ್ಥ್ ಮಾತ್ರ ನೀರಿಗಿಳಿದ್ದಾನೆ. ಈ ವೇಳೆ ಸಮರ್ಥ್ ಏಕಾಏಕಿ ನಾಪತ್ತೆಯಾದಾಗ ಗಾಬರಿಗೊಂಡ ಗೆಳೆಯ, ಬೊಬ್ಬೆ ಹಾಕಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾನೆ.
ಸ್ಥಳೀಯರು ನೀರಿಗಿಳಿದು, ಶವ ಮೇಲೆ ತೆಗೆದಿದ್ದು, ಬೆಳ್ತಂಗಡಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸುದ್ದಿ ತಿಳಿದ ಶ್ರೀ ಗುರುದೇವ ಕಾಲೇಜಿನ ಅಧ್ಯಕ್ಷ ಹಾಗೂ ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಆಸ್ಪತ್ರೆಗೆ ಬಂದು, ಮುಂದಿನ ವ್ಯವಸ್ಥೆಗೆ ಸಹಕರಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…