ಬೆಳ್ತಂಗಡಿ: ಅಕ್ರಮ ಗೋಸಾಗಟದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿಯೊಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ನವೆಂಬರ್ 2 ರಂದು ಧರ್ಮಸ್ಥಳ ಪೊಲೀಸರು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಯಾನೆ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.
ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಝೊಹಾರ ಸೇರಿ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ A-2 ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ತಂಚಿಬೆಟ್ಟು ನಿವಾಸಿ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಉಳ್ಳಾದಲ್ಲಿರುವ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯನ್ನು ನವೆಂಬರ್ 4 ರಂದು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]