ಬೆಳ್ತಂಗಡಿ : ಅಕ್ರಮವಾಗಿ ಸರಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ಪೊಲೀಸರು ಜ.8 ರಂದು ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ಕಡಿರುದ್ಯಾವರ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ದಾಳಿ ಮಾಡಿದಾಗ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಹಿಚಾಚಿ ಮೂಲಕ ಟಿಪ್ಪರ್ ಲಾರಿಗೆ ತುಂಬಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಪೊಲೀಸರ ದಾಳಿ ವೇಳೆ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಲಾರಿ ಬಿಟ್ಟು ಓಡಿ ಹೋಗಿದ್ದು, ಹಿಟಾಚಿ ಅಪರೇಟರ್ ನನ್ನು ಹಿಡಿದು ವಿಚಾರಿಸಿದಾಗ ತನ್ನ ಹೆಸರು ಚಾರ್ಮಡಿಯ ಮಹಮ್ಮದ್ ಶಮೀರುದ್ದಿನ್ ಎಂಬುದಾಗಿ ಹಾಗೂ ಓಡಿ ಹೋದ ಟಿಪ್ಪರ್ ಚಾಲಕ ನ ಹೆಸರು ಚಾರ್ಮಾಡಿಯ ಹೆಚ್.ಹನೀಫ್ ಎಂಬುದಾಗಿ ತಿಳಿಸಿದ್ದಾನೆ. ಬೆಳ್ತಂಗಡಿ ಪೊಲೀಸರಿಗೆ ತಿಳಿಯದಂತೆ ಹಲವು ಸಮಯಗಳಿಂದ ಕದ್ದುಮುಚ್ಚಿ ಆರೋಪಿ ಇದೇ ಸ್ಥಳದಿಂದ ಸರಕಾರದ ಬೊಕ್ಕಸಕ್ಕೆ ವಂಚನೆ ಮಾಡಿ ಮರಳು ಕಳ್ಳತನ ಮಾಡುತ್ತಿರುವುದು ತನಿಖೆ ವೇಳೆ ತಿಳಿದು ಬಂದಿದೆ.
ಅಕ್ರಮವಾಗಿ ಮರಳು ತುಂಬಿದ್ದ 3,50,000 ಮೌಲ್ಯದ ಟಿಪ್ಪರ್ KA-41-C-0057 ಮತ್ತು 2,50,000 ಮೌಲ್ಯದ DOOSAN HITACHI- 150 ವಶಪಡಿಸಿಕೊಂಡಿದ್ದು, ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದ ಚಾರ್ಮಾಡಿ ನಿವಾಸಿಗಳಾದ ಮಹಮ್ಮದ್ ಶಮೀರುದ್ದಿನ್ ಮತ್ತು ಹೆಚ್.ಹನೀಫ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2023(u/s303(2),3,(5)) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…