ಬೆಳ್ತಂಗಡಿ: ಬಂದಾರು ಗ್ರಾಮದ ನೆರೋಲ್ದಪಲ್ಕೆ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ಆಕೆಗೆ ಮರ್ಯಾದೆಗೆ ಲೈಂಗಿಕ ಕಿರುಕುಳ ನಿಡಿರುವ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕ ಹಾಗೂ ಮತ್ತೊಬ್ಬನ ಮೇಲೆ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆಟೋ ರಿಕ್ಷಾ ಚಾಲಕ ಸಾದಿಕ್ ಮತ್ತು ಸ್ಥಳೀಯ ನಿವಾಸಿ ಕರೀಂ ಅವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂನ್ 18 ರಂದು 17 ವರ್ಷದ ಸಂತ್ರಸ್ತ ಬಾಲಕಿ ತನ್ನ ತಾಯಿ ಪಡೆದ ಸಾಲದ ಕಂತು ಪಾವತಿಸಲು ಸ್ವಸಹಾಯ ಸಂಘದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಳು. ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಪರಿಚಯವಿರುವ ಕರೀಂ ಮತ್ತು ಆಟೋ ಚಾಲಕ ಸಾದಿಕ್ ಎಂಬಾತ ಬಾಲಕಿಯ ಕುಟುಂಬದೊಂದಿಗೆ ಇರುವ ಪರಿಚಯವನ್ನು ದುರುಪಯೋಗಪಡಿಸಿಕೊಂಡು ಆಕೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ.
ಕರೀಂ ಸಂತ್ರಸ್ತ ಬಾಲಕಿಗೆ 200 ರೂ ನೀಡಿ ತನ್ನೊಂದಿಗೆ ಆಟೋ ರಿಕ್ಷಾದಲ್ಲಿ ಬೆಳ್ತಂಗಡಿಗೆ ಬರುವಂತೆ ಆಮಿಷ ಒಡ್ಡಿ ಕಿರುಕುಳ ನೀಡಿದ್ದಾನೆ. ಸಂತ್ರಸ್ತ ಬಾಲಕಿ ಇದನ್ನು ವಿರೋಧಿಸಿ ಆಟೋ ರಿಕ್ಷಾದಿಂದ ಜಿಗಿದಿದ್ದಾಳೆ. ಆಕೆಯ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ಬಾಲಕಿ ವಾಹನದಿಂದ ಜಿಗಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಸಂತ್ರಸ್ತ ಬಾಲಕಿ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…