ಬೆಳ್ತಂಗಡಿ : ಆ್ಯಂಬುಲೆನ್ಸ್ ಚಾಲಕನೊಬ್ಬನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಇದೀಗ ಬೆಂಗಳೂರಿನ ದಂಪತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಬೆಂಗಳೂರಿನ ದಂಪತಿ ಶರತ್, ಶೃತಿ ಎಂದು ಗುರುತಿಸಲಾಗಿದೆ. ಕಡಬದಿಂದ ನೆರಿಯಾಗೆ ಬರುತ್ತಿದ್ದ ಪಶು ವೈದ್ಯಕೀಯ ಆ್ಯಂಬುಲೆನ್ಸ್ ಚಾಲಕನನ್ನು ಓವರ್ ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ರಸ್ತೆ ಮಧ್ಯೆ ನಿಲ್ಲಿಸಿ ಹಲ್ಲೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸ್ಥಳೀಯರ ಮೇಲೂ ದಂಪತಿ ಕೂಗಾಡಿದ್ದಾರೆ.
ಹಲ್ಲೆಗೊಳಗಾದ ಆ್ಯಂಬುಲೆನ್ಸ್ ಚಾಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಹಲ್ಲೆ ನಡೆಸಿದ ದಂಪತಿಯನ್ನು ವಶಕ್ಕೆ ತೆಗದುಕೊಂಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…