Featured

ಬೆಳ್ತಂಗಡಿ  ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ : ಅಮಿತಾನಂದ ಹೆಗ್ಡೆ ಮತ್ತು ರಾಧಾಕೃಷ್ಣ ಟಿ. ಆಯ್ಕೆ – Vishwanews24

ಬೆಳ್ತಂಗಡಿ  ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ : ಅಮಿತಾನಂದ ಹೆಗ್ಡೆ ಮತ್ತು ರಾಧಾಕೃಷ್ಣ ಟಿ. ಆಯ್ಕೆ

ಬೆಳ್ತಂಗಡಿ: ರಾಜ್ಯ ಸರಕಾರ ನೀಡುವ 2022ನೇ ಸಾಲಿನ ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ ಮತ್ತು ರಾಧಾಕೃಷ್ಣ ಟಿ.  ಆಯ್ಕೆಯಾಗಿದ್ದಾರೆ.

ಅಮಿತಾನಂದ ಹೆಗ್ಡೆ
ಬೆಳ್ತಂಗಡಿ: ಅಮಿತಾನಂದ ಹೆಗ್ಡೆ ಅವರು ಬಂಗಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ. ಉಜಿರೆ ಪಿಲಿಕುಂಜೆ ನಿವಾಸಿಯಾಗಿರುವ ಅವರು ಸ.ಹಿ.ಪ್ರಾ. ಶಾಲೆ ಉಪ್ಪಿನಂಗಡಿ, ಹಳೆಪೇಟೆ ಉಜಿರೆಯಲ್ಲಿ ಶಿಕ್ಷಕರಾಗಿ, ಸಮೂಹ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯಲ್ಲಿ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಭಾರತ್‌ ಸೌಟ್ಸ್‌ ಮತ್ತು ಗೈಡ್ಸ್‌ನ ಕಾರ್ಯದರ್ಶಿಯಾಗಿ ತಾಲೂಕಿನ ವಿವಿಧ ಕಡೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಮುದಾಯಕ್ಕಾಗಿ ವಿವಿಧ ಕಾರ್ಯಕ್ರಮಗಳು ಹಾಗೂ ಜಿಲ್ಲಾ ತಾಲೂಕು ಮಟ್ಟದ ಸಮಾವೇಶಗಳನ್ನು ಆಯೋಜಿಸಿದ್ದಾರೆ.

ಕಾರ್ಕಳ: ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಸಂಜೀವ ದೇವಾಡಿಗ – Vishwanews24

ರಾಧಾಕೃಷ್ಣ ಟಿ.
ಬೆಳ್ತಂಗಡಿ: ರಾಧಾಕೃಷ್ಣ ಟಿ. ಅವರು ಕೊಯ್ಯೂರು ಸರಕಾರಿ ಪ.ಪೂ. ಪ್ರೌಢ ಶಾಲಾ ವಿಜ್ಞಾನ ಶಿಕ್ಷಕರಾಗಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ತಚ್ಚಾಮೆ ನಿವಾಸಿಯಾಗಿರುವ ಅವರು ಪ್ರಸ್ತುತ ಬೆಳ್ತಂಗಡಿಯ ಕುತ್ಯಾರು ಬಳಿ ನೆಲೆಸಿದ್ದಾರೆ.

24 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿರುವ ಅವರು ಕೊಯ್ಯೂರು ಪ್ರೌಢ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾಗಿ, ಬೆಳ್ತಂಗಡಿ ತಾಲೂಕು ವಿಜ್ಞಾನ ಶಿಕ್ಷಕರ ವೇದಿಕೆಯ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ವಿಜ್ಞಾನ ಶಿಕ್ಷಕರ ವೇದಿಕೆ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಜೀವಜಲ ಮರುಪೂರಣ ತಾಲೂಕು ನೋಡಲ್‌ ಅಧಿಕಾರಿಯಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಅನುಷ್ಠಾನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಮೈಸೂರು ವಿಭಾಗ ಅತ್ಯುತ್ತಮ ವಿಜ್ಞಾನ ಕೇಂದ್ರ ಪ್ರಶಸ್ತಿ ಮಂಡ್ಯ ಜಿಲ್ಲೆ, ಜನ ಮೆಚ್ಚಿದ ಶಿಕ್ಷಕ ಪ್ರಶಸ್ತಿ ಮಂಡ್ಯ ಜಿಲ್ಲೆ ಸಹಿತ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಜತೆಗೆ ಜೀವ ವೈವಿಧ್ಯ ಸಂರಕ್ಷಣೆಯಡಿ ಅವನತಿಯಲ್ಲಿರುವ ಗಿಡಗಳನ್ನು ರಕ್ಷಿಸುವ ಮಹತ್ಕಾರ್ಯದಲ್ಲಿ ತೊಡಗಿದ್ದಾರೆ.

ನೌಕಾಪಡೆಯ ನೂತನ ಲಾಂಛನ, ಧ್ವಜ ಅನಾವರಣ ಮಾಡಿದ ಪ್ರಧಾನಿ ಮೋದಿ – Vishwanews24

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

4 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

7 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

11 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

11 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

11 hours ago