ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿದ್ದ ಒಬ್ಬನಿಗೆ ಸ್ಥಳದಲ್ಲಿದ್ದವರು ಹಲ್ಲೆ ನಡೆಸಿರುವುದಾಗಿಯೂ ತಿಳಿದು ಬಂದಿದೆ.
ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು, ಗುರುವಾಯಕೆರೆಯಲ್ಲಿ ವಾಹನವನ್ನು ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಸಿಕ್ಕಿಬಿದ್ದವನ ಮೇಲೆ ಹಲ್ಲೆ ಮಾಡಲಾಗಿದೆ ತಿಳಿದು ಬಂದಿದೆ.
ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬರ್ ಪ್ಲೇಟ್ ಅಂಟಿಸಿರುವುದು ಕಂಡುಬಂದಿದೆ. ಘಟನೆಯ ವೇಳೆ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…