ಬೆಳ್ತಂಗಡಿ: ಮಂಗಳೂರಿನ ಕಾಲೇಜು ಸೇರಲು ಕಿಟ್ರ್ಯಾಪ್ ಡ್ರಾಮಾ ಸೃಷ್ಟಿಸಿದ ಕಾಲೇಜು ಕನೈಯ ನಾಟಕ ಪೊಲೀಸ್ ತನಿಖೆಯಲ್ಲಿ ಬದಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸೋಮವಾರ ನಡೆದಿದೆ ಎನ್ನಲಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯ ಕಿಡ್ನಾಪ್ ಯತ್ನ ಪ್ರಕರಣ ಎಲ್ಲರನ್ನೂ ಆತಂಕಕ್ಕೆ ದೂಡಿತ್ತು. ಮೂವರು ಕಾರಿನಲ್ಲಿ ಬಂದು ಕಿಟ್ರ್ಯಾಪ್ಗೆ ಯತ್ನಿಸಿದ್ದಲ್ಲದೆ, ಕೈಗೆ ಚೂರಿಯಿಂದ ಇರಿದಿದ್ದಾರೆ. ಅದೇ ಸಂದರ್ಭ ಯಾರೋ ವ್ಯಕ್ತಿಯೋರ್ವರು ಬಂದಿದ್ದರಿಂದ ಅಪಹರಣಕಾರರು ತನ್ನನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು ಎಂದು ಯುವತಿ ಹೇಳಿಕೆ ನೀಡಿದ್ದಳು.
ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯನ್ನು ಭೇಟಿಯಾಗಲು ಶಾಸಕ ಹರೀಶ್ ಪೂಂಜಾ ಕೂಡ ದೌಡಾಯಿಸಿ ಮಾತುಕತೆ ನಡೆಸಿದ್ದರು. ಬೆಳ್ತಂಗಡಿ ಪೊಲೀಸರಲ್ಲದೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರಿನಿಂದ ದೌಡಾಯಿಸಿದ್ದರು. ನಿನ್ನೆ ಇಡೀ ದಿನ ಪೊಲೀಸರು ಈ ಬಗ್ಗೆ ಕಣ್ಣಿಗೆ ಎಣ್ಣೆ ಬಿಟ್ಟು ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ತನಿಖೆ ಚುರುಕುಗೊಳಿಸುತ್ತಿದ್ದಂತೆ ಬಾಲಕಿಯ ಕಿಟ್ರ್ಯಾಪ್ ಡ್ರಾಮಾ ಬಯಲಿಗೆ ಬಂದಿದ್ದು, ಆಕೆಯ ಬಾಯಿಂದಲೇ ಕಟ್ಟುಕತೆ ಬಯಲಾಗಿದೆ. ಆಕೆಗೆ ಮಂಗಳೂರಿನಲ್ಲಿರುವ ಪಿಯುಸಿ ಕಾಲೇಜು ಸೇರ್ಪಡೆಯಾಗಬೇಕಿತ್ತು. ಆದರೆ ಮನೆಯವರು ಬೆಳ್ತಂಗಡಿಯಲ್ಲೇ ಕಾಲೇಜಿಗೆ ಸೇರಿಸಿದ್ದರು.
ಆದ್ದರಿಂದ ಕಿಟ್ರ್ಯಾಪ್ ಡ್ರಾಮಾ ಮಾಡಿದ್ದಲ್ಲಿ ಮನೆಯವರು ಮಂಗಳೂರಿನ ಪಿಯುಸಿ ಕಾಲೇಜಿಗೆ ಸೇರಿಸುತ್ತಾರೆ ಅನ್ನುವ ಸ್ಕ್ಯಾನ್ ಮಾಡಿದ್ದಳು.
ಅದಕ್ಕಾಗಿ ಆಕೆ ತಾನೇ ಕಿಟ್ರ್ಯಾಪ್ ಡ್ರಾಮಾ ಸೃಷ್ಟಿಸಿದ್ದಳು. ಬ್ಯಾಗ್ನಲ್ಲಿರೋ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿದ್ದಳು. ಶಾಲಾ ಬ್ಯಾಗ್ ಅನ್ನು ದಾರಿಯಲ್ಲೇ ಬಿಸಾಕಿದ್ದಳು. ವಿದ್ಯಾರ್ಥಿನಿ ಸ್ಕೂಟಿಯನ್ನು ನಿಲ್ಲಿಸಿ ಬೇಡ್ನಿಂದ ಕೈ ಕುಯ್ದುಕೊಂಡು ನಾಟಕ ಮಾಡಿದ್ದಳು. ಒಟ್ಟಿನಲ್ಲಿ ಕಾಲೇಜು ಕನೈಯ ನಾಟಕಕ್ಕೇ ಪೊಲೀಸರೇ ಸುಸ್ತುಬೀಳುವಂತಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…