Featured

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ರೋಚಕ ತಿರುವು – vishwanews24

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ರೋಚಕ ಟ್ವಿಸ್ಟ್

ಬೆಳ್ತಂಗಡಿ: ಮಂಗಳೂರಿನ ಕಾಲೇಜು ಸೇರಲು ಕಿಟ್ರ್ಯಾಪ್ ಡ್ರಾಮಾ ಸೃಷ್ಟಿಸಿದ ಕಾಲೇಜು ಕನೈಯ ನಾಟಕ ಪೊಲೀಸ್ ತನಿಖೆಯಲ್ಲಿ ಬದಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸೋಮವಾರ ನಡೆದಿದೆ ಎನ್ನಲಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯ ಕಿಡ್ನಾಪ್ ಯತ್ನ ಪ್ರಕರಣ ಎಲ್ಲರನ್ನೂ ಆತಂಕಕ್ಕೆ ದೂಡಿತ್ತು. ಮೂವರು ಕಾರಿನಲ್ಲಿ ಬಂದು ಕಿಟ್ರ್ಯಾಪ್‌ಗೆ ಯತ್ನಿಸಿದ್ದಲ್ಲದೆ, ಕೈಗೆ ಚೂರಿಯಿಂದ ಇರಿದಿದ್ದಾರೆ. ಅದೇ ಸಂದರ್ಭ ಯಾರೋ ವ್ಯಕ್ತಿಯೋರ್ವರು ಬಂದಿದ್ದರಿಂದ ಅಪಹರಣಕಾರರು ತನ್ನನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು ಎಂದು ಯುವತಿ ಹೇಳಿಕೆ ನೀಡಿದ್ದಳು.
ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯನ್ನು ಭೇಟಿಯಾಗಲು ಶಾಸಕ ಹರೀಶ್ ಪೂಂಜಾ ಕೂಡ ದೌಡಾಯಿಸಿ ಮಾತುಕತೆ ನಡೆಸಿದ್ದರು. ಬೆಳ್ತಂಗಡಿ ಪೊಲೀಸರಲ್ಲದೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರಿನಿಂದ ದೌಡಾಯಿಸಿದ್ದರು. ನಿನ್ನೆ ಇಡೀ ದಿನ ಪೊಲೀಸರು ಈ ಬಗ್ಗೆ ಕಣ್ಣಿಗೆ ಎಣ್ಣೆ ಬಿಟ್ಟು ಕಾರ್ಯಾಚರಣೆ ನಡೆಸಿದ್ದರು.

ಪೊಲೀಸರು ತನಿಖೆ ಚುರುಕುಗೊಳಿಸುತ್ತಿದ್ದಂತೆ ಬಾಲಕಿಯ ಕಿಟ್ರ್ಯಾಪ್ ಡ್ರಾಮಾ ಬಯಲಿಗೆ ಬಂದಿದ್ದು, ಆಕೆಯ ಬಾಯಿಂದಲೇ ಕಟ್ಟುಕತೆ ಬಯಲಾಗಿದೆ. ಆಕೆಗೆ ಮಂಗಳೂರಿನಲ್ಲಿರುವ ಪಿಯುಸಿ ಕಾಲೇಜು ಸೇರ್ಪಡೆಯಾಗಬೇಕಿತ್ತು. ಆದರೆ ಮನೆಯವರು ಬೆಳ್ತಂಗಡಿಯಲ್ಲೇ ಕಾಲೇಜಿಗೆ ಸೇರಿಸಿದ್ದರು.
ಆದ್ದರಿಂದ ಕಿಟ್ರ್ಯಾಪ್ ಡ್ರಾಮಾ ಮಾಡಿದ್ದಲ್ಲಿ ಮನೆಯವರು ಮಂಗಳೂರಿನ ಪಿಯುಸಿ ಕಾಲೇಜಿಗೆ ಸೇರಿಸುತ್ತಾರೆ ಅನ್ನುವ ಸ್ಕ್ಯಾನ್ ಮಾಡಿದ್ದಳು.
ಅದಕ್ಕಾಗಿ ಆಕೆ ತಾನೇ ಕಿಟ್ರ್ಯಾಪ್ ಡ್ರಾಮಾ ಸೃಷ್ಟಿಸಿದ್ದಳು. ಬ್ಯಾಗ್‌ನಲ್ಲಿರೋ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿದ್ದಳು. ಶಾಲಾ ಬ್ಯಾಗ್ ಅನ್ನು ದಾರಿಯಲ್ಲೇ ಬಿಸಾಕಿದ್ದಳು. ವಿದ್ಯಾರ್ಥಿನಿ ಸ್ಕೂಟಿಯನ್ನು ನಿಲ್ಲಿಸಿ ಬೇಡ್‌ನಿಂದ ಕೈ ಕುಯ್ದುಕೊಂಡು ನಾಟಕ ಮಾಡಿದ್ದಳು. ಒಟ್ಟಿನಲ್ಲಿ ಕಾಲೇಜು ಕನೈಯ ನಾಟಕಕ್ಕೇ ಪೊಲೀಸರೇ ಸುಸ್ತುಬೀಳುವಂತಾಗಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago