ಮಂಗಳೂರು : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಸೋಮವಾರ ಬೆಳಿಗ್ಗೆ 8:30ರ ಸುಮಾರಿಗೆ ತನ್ನ ಸ್ಕೂಟರ್ನಲ್ಲಿ ಸಂತೆಕಟ್ಟೆ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಸ್ಕೂಟರ್ ಅನ್ನು ಅಡ್ಡಗಟ್ಟಿದ್ದಾರೆ. ಕಾರಿನ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ್ದು ಅದರಲ್ಲಿ ಮೂವರು ದುಷ್ಕರ್ಮಿಗಳು ಕೂಡ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದರೆಂದು ತಿಳಿದುಬಂದಿದೆ. ಬಾಲಕಿಯನ್ನು ಕಾರಿನ ಒಳಗೆ ಎಳೆಯಲು ಯತ್ನಿಸಿದಾಗ, ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ, ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿ ದುಷ್ಕರ್ಮಿಗಳು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಯುವತಿಯ ಕೈಗೆ ಮತ್ತು ಬೆರಳಿಗೆ ಚೂರಿಯಿಂದ ಚುಚ್ಚಿದ ಗಾಯವಾಗಿದ್ದು ಕಾಲೇಜು ಬ್ಯಾಗ್ ನೊಂದಿಗೆ ಯುವಕರು ಕಾರಿನಲ್ಲಿ ಪರಾರಿಯಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…