ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯುವತಿ ಮಾ.21 ರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್ ದೇವಸ್ಥಾನ ಕೇರಿಯ ಹರಿಹರ ಕೃಪಾ ನಿವಾಸಿ ರೇಷ್ಮಾ ಆರ್. ನಾಯ್ಕ (23) ನಾಪತ್ತೆಯಾಗಿರುವ ಯುವತಿ.
ಈಕೆ ಮಾ.20 ರಂದು ಕುಮಟಾದಿಂದ ರೈಲಿನ ಮೂಲಕ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತ ಬಂದಿದ್ದು ಮಾ.21 ರಂದು ದೇವರ ದರ್ಶನ ಬಳಿಕ ಧರ್ಮಸ್ಥಳಕ್ಕೆ ಬಸ್ ಮೂಲಕ ಬಂದಿದ್ದರು. ಅಲ್ಲಿ ದೇವರ ದರ್ಶನ ಪಡೆದ ಬಳಿಕ ರಾತ್ರಿ 8:45 ಕ್ಕೆ ವಸತಿ ಗೃಹದಲ್ಲಿ ರೂಂ ಮಾಡಿದ್ದರು. ಈ ವೇಳೆ ಯುವತಿ ರೂಂ ನ ಹೊರಾಂಡದಲ್ಲಿ ಸುತ್ತಾಡುತ್ತಿದ್ದವರು ಬಳಿಕ ಏಕಾಏಕಿ ನಾಪತ್ತೆಯಾಗಿದ್ದಾರೆ.
ರಾತ್ರಿ ಕುಟುಂಬದವರು ರೂಂ ನಲ್ಲಿ ಉಳಿದು ಮಾ.22 ರಂದು ರೇಷ್ಮಾ ಮನೆಯವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಮನೆಗೂ ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಯುವತಿಯ ಅಜ್ಜಿ ಸುಮಿತ್ರಾ ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…