ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯುವತಿ ಮಾ.21 ರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್ ದೇವಸ್ಥಾನ ಕೇರಿಯ ಹರಿಹರ ಕೃಪಾ ನಿವಾಸಿ ರೇಷ್ಮಾ ಆರ್. ನಾಯ್ಕ (23) ನಾಪತ್ತೆಯಾಗಿರುವ ಯುವತಿ.
ಈಕೆ ಮಾ.20 ರಂದು ಕುಮಟಾದಿಂದ ರೈಲಿನ ಮೂಲಕ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತ ಬಂದಿದ್ದು ಮಾ.21 ರಂದು ದೇವರ ದರ್ಶನ ಬಳಿಕ ಧರ್ಮಸ್ಥಳಕ್ಕೆ ಬಸ್ ಮೂಲಕ ಬಂದಿದ್ದರು. ಅಲ್ಲಿ ದೇವರ ದರ್ಶನ ಪಡೆದ ಬಳಿಕ ರಾತ್ರಿ 8:45 ಕ್ಕೆ ವಸತಿ ಗೃಹದಲ್ಲಿ ರೂಂ ಮಾಡಿದ್ದರು. ಈ ವೇಳೆ ಯುವತಿ ರೂಂ ನ ಹೊರಾಂಡದಲ್ಲಿ ಸುತ್ತಾಡುತ್ತಿದ್ದವರು ಬಳಿಕ ಏಕಾಏಕಿ ನಾಪತ್ತೆಯಾಗಿದ್ದಾರೆ.
ರಾತ್ರಿ ಕುಟುಂಬದವರು ರೂಂ ನಲ್ಲಿ ಉಳಿದು ಮಾ.22 ರಂದು ರೇಷ್ಮಾ ಮನೆಯವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಮನೆಗೂ ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಯುವತಿಯ ಅಜ್ಜಿ ಸುಮಿತ್ರಾ ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…