ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಯುವತಿ ಮಾ.21 ರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್ ದೇವಸ್ಥಾನ ಕೇರಿಯ ಹರಿಹರ ಕೃಪಾ ನಿವಾಸಿ ರೇಷ್ಮಾ ಆರ್. ನಾಯ್ಕ (23) ನಾಪತ್ತೆಯಾಗಿರುವ ಯುವತಿ.
ಈಕೆ ಮಾ.20 ರಂದು ಕುಮಟಾದಿಂದ ರೈಲಿನ ಮೂಲಕ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತ ಬಂದಿದ್ದು ಮಾ.21 ರಂದು ದೇವರ ದರ್ಶನ ಬಳಿಕ ಧರ್ಮಸ್ಥಳಕ್ಕೆ ಬಸ್ ಮೂಲಕ ಬಂದಿದ್ದರು. ಅಲ್ಲಿ ದೇವರ ದರ್ಶನ ಪಡೆದ ಬಳಿಕ ರಾತ್ರಿ 8:45 ಕ್ಕೆ ವಸತಿ ಗೃಹದಲ್ಲಿ ರೂಂ ಮಾಡಿದ್ದರು. ಈ ವೇಳೆ ಯುವತಿ ರೂಂ ನ ಹೊರಾಂಡದಲ್ಲಿ ಸುತ್ತಾಡುತ್ತಿದ್ದವರು ಬಳಿಕ ಏಕಾಏಕಿ ನಾಪತ್ತೆಯಾಗಿದ್ದಾರೆ.
ರಾತ್ರಿ ಕುಟುಂಬದವರು ರೂಂ ನಲ್ಲಿ ಉಳಿದು ಮಾ.22 ರಂದು ರೇಷ್ಮಾ ಮನೆಯವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ಮನೆಗೂ ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಯುವತಿಯ ಅಜ್ಜಿ ಸುಮಿತ್ರಾ ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…