ಬೆಳ್ತಂಗಡಿ: ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ ಹಿಡಿದು, ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.
ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬುವರ ಮನೆಯಲ್ಲಿ ಸುಮಾರು 5 ಅಡಿ ಉದ್ದದ ಸಾರಿಬಳ ಹಾವು ಕೋಳಿಮರಿಯನ್ನು ನುಂಗುತ್ತಿದ್ದ ಸಮಯ ಅದನ್ನು ಕಂಡ ಮನೆಯವರು ಉರಗಮಿತ್ರ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದಾರೆ.
ಅವರು ತಕ್ಷಣ ಅವರು ಆಗಮಿಸಿ ರಕ್ಷಿಸಿದ್ದಾರೆ. ಫೋರೆಸ್ಟನ್ಸ್ ಬೆಕ್ಕು ಹಾವು ಅಥವಾ ಸಾರಿಬಳ ಎಂದೇ ಕರೆಯಲ್ಪಡುವ ಈ ಹಾವು ಹೆಚ್ಚಾಗಿ ಗುಜರಾತ್, ಕೇರಳ ಹಾಗೂ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಲ್ಲಿ ಕಂಡು ಬರುತ್ತದೆ. ಇವು ಜನವಸತಿ ಪ್ರದೇಶದಲ್ಲಿ ಕಂಡುಬರುವುದು ತೀರಾ ವಿರಳ.
ರಾತ್ರಿ ಸಮಯ ಹೆಚ್ಚಿನ ಸಂಚಾರ ನಡೆಸುವ ಇವುಗಳ ಪ್ರಮುಖ ಆಹಾರ ಸಣ್ಣ ಪಕ್ಷಿ, ಮೊಟ್ಟೆ, ಇಲಿ, ಬಾವಲಿ ಇತ್ಯಾದಿ. ಇವುಗಳಲ್ಲೂ ಎರಡು ಪ್ರಭೇದಗಳಿದ್ದು ಬೂದು ಬಣ್ಣ ಹಾಗೂ ಕಪ್ಪು ಚುಕ್ಕೆ, ಇನ್ನೊಂದು ಪ್ರಭೇದ ಕಪ್ಪು ಚುಕ್ಕೆಗಳೊಂದಿಗೆ, ತಿಳಿ ಕೆಂಪು, ಕಂದು ಬಣ್ಣವನ್ನು ಹೊಂದಿರುತ್ತದೆ.
ಕೊಯ್ಯೂರಿನಲ್ಲಿ ಈ ಪ್ರಭೇದದ ಹಾವು ಕಂಡುಬಂದಿದೆ. ತನ್ನ 11 ವರ್ಷಗಳ ಹಾವು ಹಿಡಿಯುವ ಸೇವೆಯಲ್ಲಿ ಇದುವರೆಗೆ ಬೂದು ಬಣ್ಣದ ಸಾರಿಬಾಳ ಎರಡು ಬಾರಿ ಹಾಗೂ ತಿಳಿ ಕೆಂಪು ಕಂಡು ಕಂದು ಬಣ್ಣದ ಹಾವು ಇದೇ ಮೊದಲ ಬಾರಿ ಕಂಡು ಬಂದಿದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.
ಇವು ವಿಷ ರಹಿತ ಹಾವುಗಳಾಗಿದ್ದು ಕಟ್ಟುಹಾವನ್ನು ಹೋಲುವುದರಿಂದ ಇವು ಕಂಡು ಬಂದಲ್ಲಿ ಜನರು ಕೊಲ್ಲಲು ಮುಂದಾಗುತ್ತಿದ್ದಾರೆ.
ಎಲ್ಲ ಜೀವಿಗಳಂತೆ ಹಾವುಗಳಿಗೂ ಬದುಕುವ ಹಕ್ಕಿದ್ದು ಯಾವುದೇ ಹಾವು ಕಂಡು ಬಂದರೆ ಅವುಗಳನ್ನು ರಕ್ಷಿಸುವುದು ಅತಿ ಅಗತ್ಯ ಎಂದು ಸ್ನೇಕ್ ಅಶೋಕ್ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…