Featured

ಬೆಳ್ತಂಗಡಿ: ಕೋಳಿ ನುಂಗಿದ ಅಪರೂಪದ ಸಾರಿಬಳ ಹಾವು – Vishwanews24

ಬೆಳ್ತಂಗಡಿ: ಕೋಳಿ ನುಂಗಿದ ಅಪರೂಪದ ಸಾರಿಬಳ ಹಾವು

ಬೆಳ್ತಂಗಡಿ: ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್‌ ಸುರಕ್ಷಿತವಾಗಿ ಹಿಡಿದು, ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬುವರ ಮನೆಯಲ್ಲಿ ಸುಮಾರು 5 ಅಡಿ ಉದ್ದದ ಸಾರಿಬಳ ಹಾವು ಕೋಳಿಮರಿಯನ್ನು ನುಂಗುತ್ತಿದ್ದ ಸಮಯ ಅದನ್ನು ಕಂಡ ಮನೆಯವರು ಉರಗಮಿತ್ರ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದಾರೆ.

ಅವರು ತಕ್ಷಣ ಅವರು ಆಗಮಿಸಿ ರಕ್ಷಿಸಿದ್ದಾರೆ. ಫೋರೆಸ್ಟನ್ಸ್ ಬೆಕ್ಕು ಹಾವು ಅಥವಾ ಸಾರಿಬಳ ಎಂದೇ ಕರೆಯಲ್ಪಡುವ ಈ ಹಾವು ಹೆಚ್ಚಾಗಿ ಗುಜರಾತ್, ಕೇರಳ ಹಾಗೂ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಲ್ಲಿ ಕಂಡು ಬರುತ್ತದೆ. ಇವು ಜನವಸತಿ ಪ್ರದೇಶದಲ್ಲಿ ಕಂಡುಬರುವುದು ತೀರಾ ವಿರಳ.

ರಾತ್ರಿ ಸಮಯ ಹೆಚ್ಚಿನ ಸಂಚಾರ ನಡೆಸುವ ಇವುಗಳ ಪ್ರಮುಖ ಆಹಾರ ಸಣ್ಣ ಪಕ್ಷಿ, ಮೊಟ್ಟೆ, ಇಲಿ, ಬಾವಲಿ ಇತ್ಯಾದಿ. ಇವುಗಳಲ್ಲೂ ಎರಡು ಪ್ರಭೇದಗಳಿದ್ದು ಬೂದು ಬಣ್ಣ ಹಾಗೂ ಕಪ್ಪು ಚುಕ್ಕೆ, ಇನ್ನೊಂದು ಪ್ರಭೇದ ಕಪ್ಪು ಚುಕ್ಕೆಗಳೊಂದಿಗೆ, ತಿಳಿ ಕೆಂಪು, ಕಂದು ಬಣ್ಣವನ್ನು ಹೊಂದಿರುತ್ತದೆ.

ಕೊಯ್ಯೂರಿನಲ್ಲಿ ಈ ಪ್ರಭೇದದ ಹಾವು ಕಂಡುಬಂದಿದೆ. ತನ್ನ 11 ವರ್ಷಗಳ ಹಾವು ಹಿಡಿಯುವ ಸೇವೆಯಲ್ಲಿ ಇದುವರೆಗೆ ಬೂದು ಬಣ್ಣದ ಸಾರಿಬಾಳ ಎರಡು ಬಾರಿ ಹಾಗೂ ತಿಳಿ ಕೆಂಪು ಕಂಡು ಕಂದು ಬಣ್ಣದ ಹಾವು ಇದೇ ಮೊದಲ ಬಾರಿ ಕಂಡು ಬಂದಿದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.

ಇವು ವಿಷ ರಹಿತ ಹಾವುಗಳಾಗಿದ್ದು ಕಟ್ಟುಹಾವನ್ನು ಹೋಲುವುದರಿಂದ ಇವು ಕಂಡು ಬಂದಲ್ಲಿ ಜನರು ಕೊಲ್ಲಲು ಮುಂದಾಗುತ್ತಿದ್ದಾರೆ.

ಎಲ್ಲ ಜೀವಿಗಳಂತೆ ಹಾವುಗಳಿಗೂ ಬದುಕುವ ಹಕ್ಕಿದ್ದು ಯಾವುದೇ ಹಾವು ಕಂಡು ಬಂದರೆ ಅವುಗಳನ್ನು ರಕ್ಷಿಸುವುದು ಅತಿ ಅಗತ್ಯ ಎಂದು ಸ್ನೇಕ್ ಅಶೋಕ್ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago