ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಮನೆಗೆ ಲೈಟಿಂಗ್ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ; ವಿದ್ಯಾರ್ಥಿ ಮೃತ್ಯು – vishwanews24
ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಮನೆಗೆ ಲೈಟಿಂಗ್ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ; ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಸ್ಟೀಪನ್ (14) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ.
ಉಚ್ಚಿಲ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ; ಪಾದಚಾರಿ ಸಾವು – vishwanews24
ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಾಕ್ಲಾಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷಗಳ ಹಿಂದೆ ಮೃತ ಪಟ್ಟಿದ್ದರು. ಈತ ಅಜ್ಜಿ ಮನೆಯಲ್ಲಿದ್ದು ಶಿಕ್ಷಣ ಪಡೆಯುತ್ತಿದ್ದ. ಇಂದು ಶಾಲೆಗೆ ರಜೆ ಮಾಡಿ ಮನೆಯಲ್ಲಿ ಅಲಂಕಾರ ಮಾಡುತ್ತಿದ್ದ ಎನ್ನಲಾಗಿದೆ.
ಮುಂಬೈ ದೋಣಿ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ – vishwanews24
