ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಸ್ಟೀಪನ್ (14) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ.
ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಾಕ್ಲಾಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷಗಳ ಹಿಂದೆ ಮೃತ ಪಟ್ಟಿದ್ದರು. ಈತ ಅಜ್ಜಿ ಮನೆಯಲ್ಲಿದ್ದು ಶಿಕ್ಷಣ ಪಡೆಯುತ್ತಿದ್ದ. ಇಂದು ಶಾಲೆಗೆ ರಜೆ ಮಾಡಿ ಮನೆಯಲ್ಲಿ ಅಲಂಕಾರ ಮಾಡುತ್ತಿದ್ದ ಎನ್ನಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…