Featured

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ – ಈ ನಿಯಮ ಪಾಲನೆ ಕಡ್ಡಾಯ

ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯ

ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ಗುರುವಾರದಿಂದ ಮುಕ್ತವಾಗಲಿದೆ. ಈ ಬಾರಿ ಜೂ. 1ರಿಂದ ಚಾರಣಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ ತಾಂತ್ರಿಕ ಕಾರಣಗಳಿಂದ ನಿರ್ಬಂಧ ವಿಧಿಸಲಾಗಿತ್ತು. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸಿ ಕುದುರೆಮುಖ ವನ್ಯಜೀವಿ ವಿಭಾಗದಿಂದ ಮತ್ತೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಗಡಾಯಿಕಲ್ಲು ಚಾರಣಕ್ಕೆ ತೆರಳುವ ಪ್ರತಿಯೊಬ್ಬರೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಪ್ರತಿದಿನ ಗರಿಷ್ಠ 500 ಮಂದಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಸುರಕ್ಷೆ ದೃಷ್ಟಿಯಿಂದ ಮಿತಿ ವಿಧಿಸಲಾಗಿದೆ. ಚಾರಣಿಗರಿಗೆ ಬೆಳಗ್ಗೆ 7ರಿಂದ ಅಪರಾಹ್ನ 1ರ ವರೆಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ ಎಂದು ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಗುರುತಿನ ಚೀಟಿ, ಶುಲ್ಕ ಕಡ್ಡಾಯ

ಪ್ರವೇಶದ ವೇಳೆ ಫೋಟೋ, ವಿಳಾಸ ಹಾಗೂ ಜನ್ಮ ದಿನಾಂಕ ಹೊಂದಿರುವ ಸರಕಾರದ ಮಾನ್ಯತೆ ಪಡೆದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿ ಸಬೇಕು. ಅಲ್ಲದೆ, ಪ್ರತಿ ವ್ಯಕ್ತಿಗೆ 50 ರೂ. ಪ್ರವೇಶ ಶುಲ್ಕವನ್ನು ಆಫ್‌ಲೈನ್‌ ಮೂಲಕ ಪಾವತಿಸಬೇಕಾಗಿದೆ. ಮಳೆಗಾಲದಲ್ಲಿ ಮೆಟ್ಟಿಲುಗಳು ಹಾಗೂ ಕಲ್ಲುಗಳು ಜಾರುವ ಸಾಧ್ಯತೆ ಇರುವುದರಿಂದ ಚಾರಣಿಗರು ಎಚ್ಚರಿಕೆ ವಹಿಸಬೇಕಾಗಿದ್ದು, ಪ್ಲಾಸ್ಟಿಕ್ ವಸ್ತು, ಮದ್ಯಪಾನ, ಧೂಮಪಾನ ನಿಷೇಧಿಸಲಾಗಿದೆ.

ಚಾರಣಿಗರಿಗೆ ತೊಂದರೆ ಆಗಬಾರದೆಂದು 500 ಮಂದಿಯ ಮಿತಿ ಮಾಡಿದ್ದೇವೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್‌ಎಫ್‌ಒ ಶರ್ಮಿಷ್ಟಾ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

4 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

33 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago