ಬೆಳ್ತಂಗಡಿ : ಚಿಕ್ಕಮಗಳೂರು ಆಸುಪಾಸು ಹಾಗೂ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ನ.16ರ ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿವೆ.
2 ಗಂಟೆಯಿಂದ ಭಾರಿ ಮಳೆಯಾದ ಪರಿಣಾಮ ರಾಷ್ಟ್ರೀಯ ಉದ್ಯಾನವನದಂಚಿನ ಬಂಡಾಜೆ ಅರ್ಬಿ ಫಾಲ್ಸ್ನಲ್ಲಿ ಮಣ್ಣುಮಿಶ್ರಿತ ನೀರು ಧುಮ್ಮಿಕ್ಕಿ ಹರಿದ ಪರಿಣಾಮ ಗುಡ್ಡ ಪ್ರದೇಶ ಕುಸಿದಂತೆ ಭಾಸವಾಗಿತ್ತು.
ಭಾರಿ ಮಳೆಯ ಪರಿಣಾಮ ದಿಡುಪೆ ಪರಿಸರವಾಗಿ ಹರಿಯುವ ನಂದಿಕಾಡು ಹೊಳೆ, ಆನಡ್ಕ, ನೇತ್ರಾವತಿ ನದಿ, ಕರಿಯಂದೂರು ಹೊಳೆ, ಕುಕ್ಕಾವು ಹೊಳೆಗಳಲ್ಲಿ ನೀರು ಏಕಾಏಕಿ ಹರಿದಿದ್ದು, ಅಂಗಳದಲ್ಲಿ ರಾಶಿ ಹಾಕಿದ ಅಡಿಕೆಗಳು ಕೊಚ್ಚಿಹೋಗಿವೆ. ಅಲ್ಲದೇ, ತೋಟ, ಗದ್ದೆಗಳಿಗೂ ನೀರು ನುಗ್ಗಿದ್ದು, ಅಡಿಕೆ ಮರದ ಕಾಲು ಸಂಕವೂ ಕೊಚ್ಚಿಹೋಗುವ ಮಟ್ಟಿಗೆ ನೀರು ನುಗ್ಗಿತ್ತು.
ನೇತ್ರಾವತಿ ನದಿಯ ಕೊಪ್ಪದಗಂಡಿ ಕಿರುಸೇತುವೆ ಜಲಾವೃತವಾಗಿತ್ತು. ನೆರಿಯಾ ಪ್ರದೇಶಗಳಲ್ಲಿಯೂ ನಿರಂತರ ಮಳೆಯಾಗಿದೆ. ಆದರೆ, ಬೆಳ್ತಂಗಡಿ ಇತರೆ ಕಡೆ ಭಾರಿ ಮಳೆ ಕಂಡುಬಂದಿಲ್ಲ.
ಭಾರಿ ಮಳೆಯ ಪರಿಣಾಮ ಮಲವಂತಿಗೆ ಗ್ರಾಮದಿಂದ ದಿಡುಪೆಯಾಗಿ-ಎಳನೀರು ಸಾಗುವ ಮಣ್ಣಿನ ರಸ್ತೆಗೆ ಹಾನಿಯಾಗಿದೆ. ಈ ವರ್ಷ ಎಳನೀರು ಭಾಗದಲ್ಲಿ ಎಲೆಚುಕ್ಕಿ ಹಾಗೂ ಮಳೆಯ ಪರಿಣಾಮದಿಂದ ಅಡಿಕೆ ಕೃಷಿ ಹಾನಿಯಾದರೆ, ಇನ್ನೊಂದೆಡೆ ಕಾಫಿ ಹಣ್ಣು ಕೊಯ್ಯಲಾಗದೆ, ಹಣ್ಣಾದ ಕಾಫಿ ಒಳಗಿಸಲು ಸಾಧ್ಯವಾಗಿಲ್ಲ. ಅಲ್ಲದೇ, ಭತ್ತ ಕೃಷಿಯೂ ನಾಶವಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…