Featured

ಬೆಳ್ತಂಗಡಿ : ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ಏಕಾಏಕಿ ಉಕ್ಕಿ ಹರಿದ ನದಿ – Vishwanews24

ಬೆಳ್ತಂಗಡಿ : ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ಏಕಾಏಕಿ ಉಕ್ಕಿ ಹರಿದ ನದಿ – Vishwanews24

ಬೆಳ್ತಂಗಡಿ : ಚಿಕ್ಕಮಗಳೂರು ಆಸುಪಾಸು ಹಾಗೂ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ನ.16ರ ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿವೆ.

2 ಗಂಟೆಯಿಂದ ಭಾರಿ ಮಳೆಯಾದ ಪರಿಣಾಮ ರಾಷ್ಟ್ರೀಯ ಉದ್ಯಾನವನದಂಚಿನ ಬಂಡಾಜೆ ಅರ್ಬಿ ಫಾಲ್ಸ್‌ನಲ್ಲಿ ಮಣ್ಣುಮಿಶ್ರಿತ ನೀರು ಧುಮ್ಮಿಕ್ಕಿ ಹರಿದ ಪರಿಣಾಮ ಗುಡ್ಡ ಪ್ರದೇಶ ಕುಸಿದಂತೆ ಭಾಸವಾಗಿತ್ತು.

ಭಾರಿ ಮಳೆಯ ಪರಿಣಾಮ ದಿಡುಪೆ ಪರಿಸರವಾಗಿ ಹರಿಯುವ ನಂದಿಕಾಡು ಹೊಳೆ, ಆನಡ್ಕ, ನೇತ್ರಾವತಿ ನದಿ, ಕರಿಯಂದೂರು ಹೊಳೆ, ಕುಕ್ಕಾವು ಹೊಳೆಗಳಲ್ಲಿ ನೀರು ಏಕಾಏಕಿ ಹರಿದಿದ್ದು, ಅಂಗಳದಲ್ಲಿ ರಾಶಿ ಹಾಕಿದ ಅಡಿಕೆಗಳು ಕೊಚ್ಚಿಹೋಗಿವೆ. ಅಲ್ಲದೇ, ತೋಟ, ಗದ್ದೆಗಳಿಗೂ ನೀರು ನುಗ್ಗಿದ್ದು, ಅಡಿಕೆ ಮರದ ಕಾಲು ಸಂಕವೂ ಕೊಚ್ಚಿಹೋಗುವ ಮಟ್ಟಿಗೆ ನೀರು ನುಗ್ಗಿತ್ತು.

ನೇತ್ರಾವತಿ ನದಿಯ ಕೊಪ್ಪದಗಂಡಿ ಕಿರುಸೇತುವೆ ಜಲಾವೃತವಾಗಿತ್ತು. ನೆರಿಯಾ ಪ್ರದೇಶಗಳಲ್ಲಿಯೂ ನಿರಂತರ ಮಳೆಯಾಗಿದೆ. ಆದರೆ, ಬೆಳ್ತಂಗಡಿ ಇತರೆ ಕಡೆ ಭಾರಿ ಮಳೆ ಕಂಡುಬಂದಿಲ್ಲ.

ಭಾರಿ ಮಳೆಯ ಪರಿಣಾಮ ಮಲವಂತಿಗೆ ಗ್ರಾಮದಿಂದ ದಿಡುಪೆಯಾಗಿ-ಎಳನೀರು ಸಾಗುವ ಮಣ್ಣಿನ ರಸ್ತೆಗೆ ಹಾನಿಯಾಗಿದೆ. ಈ ವರ್ಷ ಎಳನೀರು ಭಾಗದಲ್ಲಿ ಎಲೆಚುಕ್ಕಿ ಹಾಗೂ ಮಳೆಯ ಪರಿಣಾಮದಿಂದ ಅಡಿಕೆ ಕೃಷಿ ಹಾನಿಯಾದರೆ, ಇನ್ನೊಂದೆಡೆ ಕಾಫಿ ಹಣ್ಣು ಕೊಯ್ಯಲಾಗದೆ, ಹಣ್ಣಾದ ಕಾಫಿ ಒಳಗಿಸಲು ಸಾಧ್ಯವಾಗಿಲ್ಲ. ಅಲ್ಲದೇ, ಭತ್ತ ಕೃಷಿಯೂ ನಾಶವಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

15 hours ago