Featured

ಬೆಳ್ತಂಗಡಿ : ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ಏಕಾಏಕಿ ಉಕ್ಕಿ ಹರಿದ ನದಿ – Vishwanews24

ಬೆಳ್ತಂಗಡಿ : ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ಏಕಾಏಕಿ ಉಕ್ಕಿ ಹರಿದ ನದಿ – Vishwanews24

ಬೆಳ್ತಂಗಡಿ : ಚಿಕ್ಕಮಗಳೂರು ಆಸುಪಾಸು ಹಾಗೂ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ನ.16ರ ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿವೆ.

2 ಗಂಟೆಯಿಂದ ಭಾರಿ ಮಳೆಯಾದ ಪರಿಣಾಮ ರಾಷ್ಟ್ರೀಯ ಉದ್ಯಾನವನದಂಚಿನ ಬಂಡಾಜೆ ಅರ್ಬಿ ಫಾಲ್ಸ್‌ನಲ್ಲಿ ಮಣ್ಣುಮಿಶ್ರಿತ ನೀರು ಧುಮ್ಮಿಕ್ಕಿ ಹರಿದ ಪರಿಣಾಮ ಗುಡ್ಡ ಪ್ರದೇಶ ಕುಸಿದಂತೆ ಭಾಸವಾಗಿತ್ತು.

ಭಾರಿ ಮಳೆಯ ಪರಿಣಾಮ ದಿಡುಪೆ ಪರಿಸರವಾಗಿ ಹರಿಯುವ ನಂದಿಕಾಡು ಹೊಳೆ, ಆನಡ್ಕ, ನೇತ್ರಾವತಿ ನದಿ, ಕರಿಯಂದೂರು ಹೊಳೆ, ಕುಕ್ಕಾವು ಹೊಳೆಗಳಲ್ಲಿ ನೀರು ಏಕಾಏಕಿ ಹರಿದಿದ್ದು, ಅಂಗಳದಲ್ಲಿ ರಾಶಿ ಹಾಕಿದ ಅಡಿಕೆಗಳು ಕೊಚ್ಚಿಹೋಗಿವೆ. ಅಲ್ಲದೇ, ತೋಟ, ಗದ್ದೆಗಳಿಗೂ ನೀರು ನುಗ್ಗಿದ್ದು, ಅಡಿಕೆ ಮರದ ಕಾಲು ಸಂಕವೂ ಕೊಚ್ಚಿಹೋಗುವ ಮಟ್ಟಿಗೆ ನೀರು ನುಗ್ಗಿತ್ತು.

ನೇತ್ರಾವತಿ ನದಿಯ ಕೊಪ್ಪದಗಂಡಿ ಕಿರುಸೇತುವೆ ಜಲಾವೃತವಾಗಿತ್ತು. ನೆರಿಯಾ ಪ್ರದೇಶಗಳಲ್ಲಿಯೂ ನಿರಂತರ ಮಳೆಯಾಗಿದೆ. ಆದರೆ, ಬೆಳ್ತಂಗಡಿ ಇತರೆ ಕಡೆ ಭಾರಿ ಮಳೆ ಕಂಡುಬಂದಿಲ್ಲ.

ಭಾರಿ ಮಳೆಯ ಪರಿಣಾಮ ಮಲವಂತಿಗೆ ಗ್ರಾಮದಿಂದ ದಿಡುಪೆಯಾಗಿ-ಎಳನೀರು ಸಾಗುವ ಮಣ್ಣಿನ ರಸ್ತೆಗೆ ಹಾನಿಯಾಗಿದೆ. ಈ ವರ್ಷ ಎಳನೀರು ಭಾಗದಲ್ಲಿ ಎಲೆಚುಕ್ಕಿ ಹಾಗೂ ಮಳೆಯ ಪರಿಣಾಮದಿಂದ ಅಡಿಕೆ ಕೃಷಿ ಹಾನಿಯಾದರೆ, ಇನ್ನೊಂದೆಡೆ ಕಾಫಿ ಹಣ್ಣು ಕೊಯ್ಯಲಾಗದೆ, ಹಣ್ಣಾದ ಕಾಫಿ ಒಳಗಿಸಲು ಸಾಧ್ಯವಾಗಿಲ್ಲ. ಅಲ್ಲದೇ, ಭತ್ತ ಕೃಷಿಯೂ ನಾಶವಾಗಿದೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

10 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

2 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

2 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

2 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago