Featured

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ.

ಇದನ್ನೂ ಓದಿ:

ಇವರಿಬ್ಬರು ಇಂದು ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ. ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

1 hour ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

2 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

2 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

3 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

4 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago