ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ.
ಇದನ್ನೂ ಓದಿ:
ಇವರಿಬ್ಬರು ಇಂದು ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ. ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…