Featured

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಹೊಸ ನಿಯಮ ಜಾರಿ; ರಾತ್ರಿ ಸಂಚರಿಸುವ ವಾಹನಗಳ ತಪಾಸಣೆ ಕಡ್ಡಾಯ

ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ಕರಾವಳಿಯ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮಗಳು ಜಾರಿಯಾಗಲಿವೆ. ರಾತ್ರಿ ವೇಳೆ ಚೆಕ್‌ಪೋಸ್ಟ್ ಮೂಲಕ ಸಾಗುವ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಸಂಚರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿದುಬಂದಿದೆ.

ಘಾಟಿಯಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಹೊಸ ನಿಯಮ ಜಾರಿಗೆ ತರಲು ಮುಂದಾಗಿದ್ದಾರೆ. ರಾತ್ರಿ ವೇಳೆ ವಾಹನಗಳು ಕೊಟ್ಟಿಗೆಹಾರ ಚೆಕ್‌ಪೋಸ್ಟ್ ದಾಟಬೇಕಾದರೆ ಸಂಪೂರ್ಣ ತಪಾಸಣೆಗೊಂಡು ಐದು ವಾಹನಗಳು ಒಟ್ಟಾಗಿ ತೆರಳುವಂತೆ ನಿಯಮ ರೂಪಿಸಲಾಗಿದೆ.

ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಭೂಮ್ ಬ್ಯಾರಿಯರ್ ನಿರ್ಮಿಸಿ ರಾತ್ರಿ ವೇಳೆ ಓರ್ವ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಒಂದೂವರೆ ಕಿ.ಮೀ. ರಸ್ತೆಯನ್ನು ಗೋ ಕಳ್ಳರು ದುರುಪಯೋಗ ಮಾಡುತ್ತಿದ್ದರು ಎನ್ನುವ ದೂರುಗಳಿದ್ದವು. ಅಲ್ಲಿ ಕೆಲವು ಮನೆಗಳಿದ್ದು, ಸ್ಥಳೀಯರ ಜತೆ ಮಾತುಕತೆ ನಡೆಸಿ ಆ ರಸ್ತೆಯಲ್ಲಿ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಈ ಗೇಟ್ ಬಂದ್ ಮಾಡಲಾಗುತ್ತದೆ. ಇನ್ನು ಗೋಕಳ್ಳತನ ಸಹಿತ ಅಪರಾಧ ಕೃತ್ಯಗಳನ್ನು ತಡೆಯಲು ಎಸ್ಪಿ ಡಾ| ವಿಕ್ರಮ್ ಅಮಟೆ ಅವರು ಈ ಯೋಜನೆ ರೂಪಿಸಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

44 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

54 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago