Featured

ಬೆಳ್ತಂಗಡಿ: ಚಾರ್ಮಾಡಿ ಘಾಟ್‌‌ನಲ್ಲಿ ಕಾರು ಪಲ್ಟಿ – ಗಾಯಗೊಂಡಿದ್ದ ಮಹಿಳೆ ಸಾವು – Vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟ್‌‌ನಲ್ಲಿ ಕಾರು ಪಲ್ಟಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಬೆಳ್ತಂಗಡಿ,: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ‌ಗಾಯಗೊಂಡಿದ್ದ ಗಾಯಾಳುಗಳ ಪೈಕಿ ಸರೋಜಿನಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ರವಿವಾರ ರಾತ್ರಿ ಈ ಅವಘಡ‌ ನಡೆದಿತ್ತು.

ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕರಾಗಿದ್ದ ಅರುಣ್ ಗಾಯಗೊಂಡಿದ್ದರು. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆ, ಉಜಿರೆಯ ಎಸ್‌ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಳಿದವರು ಉಜಿರೆ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.

ಈ ಪೈಕಿ ಸರೋಜಿನಿ ಶೆಟ್ಟಿ ಅವರು ಮಂಗಳೂರಿಗೆ ಕರೆದೊಯ್ಯುವ ವೇಳೆಯೇ ದಾರಿ ಮಧ್ಯೆಯೇ ತೀವ್ರವಾಗಿ ಬಳಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಅಪಘಾತದಲ್ಲಿ ಪುಷ್ಪಾವತಿ ಆರ್ ಶೆಟ್ಟಿ ಅವರ ಕೈಯ ಮೂಳೆಮುರಿತಕ್ಕೊಳಗಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಪುತ್ರಿಗೆ ತಲೆಗೆ ಹೆಚ್ಚಿನ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ಪಡೆಯುತ್ತಿದ್ದಾರೆ.

ಇದೀಗ ಮೃತಪಟ್ಟಿರುವ ಸರೋಜಿನಿ ಶೆಟ್ಟಿ ಅವರ ಪತಿ ಈ ಹಿಂದೆಯೇ ಮೃತರಾಗಿದ್ದು, ಮೃತರು ಓರ್ವ ಪುತ್ರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

49 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

1 hour ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

1 hour ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago