ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಗುಡ್ಡ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ವ್ಯಾಪ್ತಿಯ ಚಿಬಿದ್ರೆಯ ಕಾಪು ಚಡಾವು ಎಂಬಲ್ಲಿ ಭಾನುವಾರ ನಡೆದಿದೆ. ಈ ಅವಘಡದಲ್ಲಿ 17 ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಬೆಂಗಳೂರು ಮೂಲದ ವೆಂಕಟಸ್ವಾಮಪ್ಪ (45) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಗಾಯಾಳುಗಳಾದ ಕೀರ್ತನಾ (15), ತನಿಷ್ಕಾ (7), ಯಶವಂತ (21), ರೂಪಾ(37), ಹಂಸಾ (39), ತನುಶ್ರೀ(21), ವಿಕಾಸ್ (13), ಅಖೀಲಾ (23), ರತ್ನಮ್ಮ (47), ಬಾಲಕೃಷ್ಣ (33), ಎಲ್ಲಮ್ಮ (62), ರೂಪಾ (33), ಪ್ರೀತಮ್ (11) ಯಲ್ಲಮ್ಮ, ಪಾವನಾ, ಮಂಜುಳಾ, ಬಿಂದುಶ್ರೀ ಮಿಥುನ್ ರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಂಗಳೂರಿನಿಂದ ಚಾರ್ಮಾಡಿ ಘಾಟ್ ಮಾರ್ಗದ ಮೂಲಕ ಮಂಗಳೂರಿಗೆ ಆಗಮಿಸುತ್ತಿದ್ದ ಮಿನಿ ಬಸ್ ಅಪಘಾತವಾಗಿದೆ. ಈ ಮಿನಿ ಬಸ್ ರಸ್ತೆ ಬಿಟ್ಟು ನದಿ ಬದಿ ಇರುವ ಗುಡ್ಡವನ್ನು ಹತ್ತಿದ್ದು, ಖಾಸಗಿ ವಿದ್ಯುತ್ ಲೈನ್ ಕಂಬಕ್ಕೆ ಬಡಿದಿದೆ. ಹೀಗಾಗಿ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…