ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಸಂಭವಿಸಿದೆ.
ಘಟನೆಯ ಕುರಿತು ಪಣಿಲಾಜೆ ನಿವಾಸಿ 90ರ ಹರೆಯದ ರುಕ್ಮಿಣಿ ಶೆಟ್ಟಿಗಾರ್ ಅವರು ದೂರು ನೀಡಿದ್ದು, ಅವರು ಫೆ. 10ರಂದು ಬೆಳಗ್ಗೆ 11.15ರ ಸುಮಾರಿಗೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿದ. ಅದನ್ನು ನಂಬಿದ ರುಕ್ಮಿಣಿಯವರು ಕಪಾಟಿನ ಲಾಕರಿನಲ್ಲಿದ್ದ ಲಕ್ಷ್ಮೀ ಪದಕ ಇರುವ ಎರಡು ಮುಕ್ಕಾಲು ಪವನ್ ನ ಚಿನ್ನದ ಸರವನ್ನು ತಂದುಕೊಟ್ಟರು. ಬಳಿಕ ಆತ ಅಂಗಳದಲ್ಲಿದ್ದ ನಳ್ಳಿಯಿಂದ ಮಗ್ ಗೆ ನೀರು ಹಾಕಿ ಬ್ರೆಶ್ ನಿಂದ ಸರವನ್ನು ತೊಳೆಯುವ ನಾಟಕ ಮಾಡಿದ್ದಾನೆ.
ಇದನ್ನೂ ಓದಿ:
ಮುಂದೆ ಪೇಪರ್ ನಲ್ಲಿ ಸುತ್ತಿ ಕೊಟ್ಟಿದ್ದು, ಫ್ಯಾನ್ ಗಾಳಿಗೆ ಇಟ್ಟು ಒಣಗಿಸುವಂತೆ ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅವರು ಪೇಪರ್ ತೆರೆದು ನೋಡಿದಾಗ ಅರಶಿನ ಪುಡಿಯಂತೆ ಕಾಣುವ ಪುಡಿ ಇದ್ದು, ಚಿನ್ನದ ಸರದ ಸಣ್ಣ ಸಣ್ಣ ತುಂಡುಗಳು, ತಾಮ್ರದ ಬಣ್ಣಕ್ಕೆ ತಿರುಗಿದ ಲಕ್ಷ್ಮೀ ಪದಕ ಕಂಡುಬಂದಿದೆ. ಚಿನ್ನದ ಸರವನ್ನು ವಂಚಿಸಿರುವ ಆರೋಪಿಯ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಪೋಟೊ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…