ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಸಂಭವಿಸಿದೆ.
ಘಟನೆಯ ಕುರಿತು ಪಣಿಲಾಜೆ ನಿವಾಸಿ 90ರ ಹರೆಯದ ರುಕ್ಮಿಣಿ ಶೆಟ್ಟಿಗಾರ್ ಅವರು ದೂರು ನೀಡಿದ್ದು, ಅವರು ಫೆ. 10ರಂದು ಬೆಳಗ್ಗೆ 11.15ರ ಸುಮಾರಿಗೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿದ. ಅದನ್ನು ನಂಬಿದ ರುಕ್ಮಿಣಿಯವರು ಕಪಾಟಿನ ಲಾಕರಿನಲ್ಲಿದ್ದ ಲಕ್ಷ್ಮೀ ಪದಕ ಇರುವ ಎರಡು ಮುಕ್ಕಾಲು ಪವನ್ ನ ಚಿನ್ನದ ಸರವನ್ನು ತಂದುಕೊಟ್ಟರು. ಬಳಿಕ ಆತ ಅಂಗಳದಲ್ಲಿದ್ದ ನಳ್ಳಿಯಿಂದ ಮಗ್ ಗೆ ನೀರು ಹಾಕಿ ಬ್ರೆಶ್ ನಿಂದ ಸರವನ್ನು ತೊಳೆಯುವ ನಾಟಕ ಮಾಡಿದ್ದಾನೆ.
ಇದನ್ನೂ ಓದಿ:
ಮುಂದೆ ಪೇಪರ್ ನಲ್ಲಿ ಸುತ್ತಿ ಕೊಟ್ಟಿದ್ದು, ಫ್ಯಾನ್ ಗಾಳಿಗೆ ಇಟ್ಟು ಒಣಗಿಸುವಂತೆ ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅವರು ಪೇಪರ್ ತೆರೆದು ನೋಡಿದಾಗ ಅರಶಿನ ಪುಡಿಯಂತೆ ಕಾಣುವ ಪುಡಿ ಇದ್ದು, ಚಿನ್ನದ ಸರದ ಸಣ್ಣ ಸಣ್ಣ ತುಂಡುಗಳು, ತಾಮ್ರದ ಬಣ್ಣಕ್ಕೆ ತಿರುಗಿದ ಲಕ್ಷ್ಮೀ ಪದಕ ಕಂಡುಬಂದಿದೆ. ಚಿನ್ನದ ಸರವನ್ನು ವಂಚಿಸಿರುವ ಆರೋಪಿಯ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಪೋಟೊ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…