ಬೆಳ್ತಂಗಡಿ: ಸೇಲ್ಸ್ ಮ್ಯಾನ್ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್ ಮಾಡಿಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ ನಡೆದಿದೆ.
ಆರೋಪಿತನಾದ ಬಿಹಾರ ಸುಫೋಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ.
ಫೆಬ್ರವರಿ 10 ರಂದು ಅಪರಿಚಿತ ಸೇಲ್ಸ್ ಮ್ಯಾನ್ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್ ಮಾಡಿಕೊಡುವುದಾಗಿ ನಂಬಿಸಿ, ಚಿನ್ನವನ್ನು ಪಡೆದುಕೊಂಡು ಅದನ್ನು ಯಾವುದೋ ದ್ರಾವಣ ಬಳಸಿ ಕರಗಿಸಿ ವಂಚಿಸಿದ್ದಾನೆ.
ಇದನ್ನೂ ಓದಿ: 👇
ಆರೋಪಿಯ ವಿರುದ್ಧ, ಅ.ಕ್ರ:13/2026, ಕಲಂ 318(4) ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ವೇಣೂರು ಠಾಣಾ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯಿಂದ ಸುಮಾರು ರೂ 75,000-ಮೌಲ್ಯದ 07.೦೦ ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಓಮನ ಎನ್. ರವರ ನೇತೃತ್ವದಲ್ಲಿ ಎ.ಎಸ್. ಐ. ವೆಂಕಟೇಶ್ ನಾಯ್ಕ, ಎ.,ಎಸ್ ಐ ಬೆನ್ನಿಚ್ಚನ್, ಹೆಚ್.ಸಿ. 405 ಕೃಷ್ಣ, ಮಹೆಚ್.ಸಿ. 913 ಶ್ರೀಮತಿ ಕೇಶವತಿ, ಪಿ.ಸಿ. 2466 ಬಸವರಾಜ್, ಪಿ.ಸಿ. 434 ಮೋಹನ್ , ಪಿ.ಸಿ 604, ರಾಕೇಶ್ ರವರ ತಂಡ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ: 👇
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…