Featured

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ

ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದಾಗ ಕೇರಳದ ಕಾಸರಗೋಡು ಮೂಲದ ಮೂವರು ಯುವಕರು ಲೈಂಗಿಕ ಕಿರುಕುಳ ನೀಡಿದ್ದು ಆರೋಪಿತ ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು ಮೇ 20ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಬಂದಿದ್ದ ಮೂವರು ಯುವಕರು ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿನಿಯರು ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ದಿಡುಪೆ ಭಾಗದ ಕಡಮಗುಂಡಿ ಜಲಪಾತಕ್ಕೆ ಭೇಟಿ ನೀಡಿದ್ದರು. ಜಲಪಾತ ವೀಕ್ಷಣೆಯ ಸಂದರ್ಭದಲ್ಲೇ ಆರೋಪಿಗಳು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಇದಕ್ಕೆ ವಿದ್ಯಾರ್ಥಿನಿಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಘಟನೆ ಗಮನಿಸಿದ ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ಮಧ್ಯಪ್ರವೇಶಿಸಿ ಆರೋಪಿಗಳನ್ನು ತಡೆದಿದ್ದಾರೆ. ಬಳಿಕ ವಿಷಯವನ್ನು ಪೊಲೀಸರಿಗೆ ತಿಳಿಸಲಾಗಿದ್ದು, ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೂವರನ್ನೂ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago