Featured

ಬೆಳ್ತಂಗಡಿ: ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ : ಹರೀಶ್ ಪೂಂಜ – Vishwanews24

ಬೆಳ್ತಂಗಡಿ: ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ : ಹರೀಶ್ ಪೂಂಜ

ಬೆಳ್ತಂಗಡಿ: ‘ಹರೀಶ್ ಪೂಂಜ ಶಾಸಕರಾಗಿ ಕಳೆದ 5 ವರ್ಷಗಳ ಅವಧಿಯಲ್ಲಿ ಬಡವರ ಕಣ್ಣೀರು ಒರೆಸುವ ಜತೆ ಎಲ್ಲಾ ಧರ್ಮದವರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದಾರೆ. ತಾಲ್ಲೂಕಿಗೆ ರೂ. 3500 ಕೋಟಿ ಅನುದಾನ ತಂದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಈ ಬಾರಿ 50 ಸಾವಿರಕ್ಕಿಂತ ಅಧಿಕ ಮತಗಳಿಂದ ಅವರು ಜಯಶಾಲಿಯಾಗುವುದು ನಿಶ್ಚಿತ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಅವರು ಸೋಮವಾರ ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರವಾಗಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದರು. ‘ಹರೀಶ್ ಪೂಂಜ ಶಾಸಕರಾದ ಮೇಲೆ ಕಳೆದ 60 ವರ್ಷಗಳಲ್ಲಿ ಆಗದ ಕೆಲಸ ಬೆಳ್ತಂಗಡಿಯಲ್ಲಾಗಿದೆ. ಸುಂದರವಾದ ಪ್ರವಾಸಿ ಬಂಗಲೆ ನಿರ್ಮಾಣವಾಗಿದೆ. ಮುಂದೆ ಮಾದರಿ ಬಸ್ ನಿಲ್ದಾಣ ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ಚತುಷ್ಪತ ರಸ್ತೆ ನಿರ್ಮಾಣವಾಗಲಿದೆ.

ಈ ಬಾರಿ ಬಿಜೆಪಿ ಸರ್ಕಾರ ಬರಲಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗಾಗಿ 10 ಸಾವಿರ ಮನೆಯನ್ನು ನಿರ್ಮಾಣ ಮಾಡುತ್ತೇವೆ’ ಎಂದರು. ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ರಾಜ್ಯದಲ್ಲಿ 120 ಕ್ಕಿಂತ ಅಧಿಕ ಸ್ಥಾನಗಳು ಬಿಜೆಪಿಗೆ ಬರಲಿದ್ದು, ಬಹುಮತದ ಬಿಜೆಪಿ ಸರ್ಕಾರ ಬಂದೇ ಬರುತ್ತದೆ. ಗ್ಯಾರಂಟಿ ಕಾರ್ಡು ಹಂಚುತ್ತಿರುವ ಕಾಂಗ್ರೆಸ್ ಪಕ್ಷಕ್ಕೇ ಗ್ಯಾರಂಟಿ ಇಲ್ಲ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತು ಸೋಮಣ್ಣ ಗೆಲುವು ನಿಶ್ಚಿತ. ಇಂದು ನರೇಂದ್ರ ಮೋದಿಯ ಆಡಳಿತದಿಂದಾಗಿ ಜಗತ್ತು ಭಾರತವನ್ನು ಕೊಂಡಾಡುತ್ತಿದೆ. ಗರೀಬಿ ಹಠಾವೋ, ಕಿಸಾನ್ ಸಮ್ಮಾನ್, ಶೌಚಾಲಯಕ್ಕೆ ಆಧ್ಯತೆ, ಕೋವಿಡ್‍ನಿಂದ ರಕ್ಷಣೆ ಮಾಡಿದ್ದು ನರೇಂದ್ರ ಮೋದಿಯವರು. ದೇಶದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲೆಡೆ ಬಿಜೆಪಿ ಜಯಗಳಿಸುವ ಅಗತ್ಯವಿದೆ ಎಂದರು.

ಪಕ್ಷದ ಅಭ್ಯರ್ಥಿ, ಶಾಸಕ ಹರೀಶ್ ಪೂಂಜ ಮಾತನಾಡಿ, ‘ತಾಲ್ಲೂಕಿಗೆ ನೆರೆ, ಕೊರೊನಾ ಬಾಧಿಸಿದ ಸಂದರ್ಭದಲ್ಲಿ ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ. ತಾಲ್ಲೂಕು, ಜಿಲ್ಲೆಯ ಹಿಂದೂ ಬಾಂಧವರು ಕಷ್ಟಕ್ಕೆ ಒಳಗಾದಾಗ ರಾತ್ರಿ ಹಗಲು ಎನ್ನದೆ ಕೆಲಸ ಮಾಡಿದ್ದೇನೆ. ಕೋಮು ಗಲಭೆ, ದೊಂಬಿ ಗಲಾಟೆ ಆಗದಂತೆ ಸಾಮರಸ್ಯದಿಂದ ಐದು ವರ್ಷ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ, 718 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ, ಉಜಿರೆ ಬೆಳಾಲು ರಸ್ತೆಯ ನಿನ್ನಿಕಲ್ಲು ಬಳಿ 116 ಎಕ್ರೆ ಭೂ ಪ್ರದೇಶವನ್ನು ಕೈಗಾರಿಕಾ ವಲಯವಾಗಿ ಮಾಡಿ ತಾಲ್ಲೂಕಿನ 2500 ಜನರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದರು.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

57 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago