Featured

ಬೆಳ್ತಂಗಡಿ: ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ : ಹರೀಶ್ ಪೂಂಜ – Vishwanews24

ಬೆಳ್ತಂಗಡಿ: ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ : ಹರೀಶ್ ಪೂಂಜ

ಬೆಳ್ತಂಗಡಿ: ‘ಹರೀಶ್ ಪೂಂಜ ಶಾಸಕರಾಗಿ ಕಳೆದ 5 ವರ್ಷಗಳ ಅವಧಿಯಲ್ಲಿ ಬಡವರ ಕಣ್ಣೀರು ಒರೆಸುವ ಜತೆ ಎಲ್ಲಾ ಧರ್ಮದವರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದಾರೆ. ತಾಲ್ಲೂಕಿಗೆ ರೂ. 3500 ಕೋಟಿ ಅನುದಾನ ತಂದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಈ ಬಾರಿ 50 ಸಾವಿರಕ್ಕಿಂತ ಅಧಿಕ ಮತಗಳಿಂದ ಅವರು ಜಯಶಾಲಿಯಾಗುವುದು ನಿಶ್ಚಿತ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಅವರು ಸೋಮವಾರ ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರವಾಗಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದರು. ‘ಹರೀಶ್ ಪೂಂಜ ಶಾಸಕರಾದ ಮೇಲೆ ಕಳೆದ 60 ವರ್ಷಗಳಲ್ಲಿ ಆಗದ ಕೆಲಸ ಬೆಳ್ತಂಗಡಿಯಲ್ಲಾಗಿದೆ. ಸುಂದರವಾದ ಪ್ರವಾಸಿ ಬಂಗಲೆ ನಿರ್ಮಾಣವಾಗಿದೆ. ಮುಂದೆ ಮಾದರಿ ಬಸ್ ನಿಲ್ದಾಣ ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ಚತುಷ್ಪತ ರಸ್ತೆ ನಿರ್ಮಾಣವಾಗಲಿದೆ.

ಈ ಬಾರಿ ಬಿಜೆಪಿ ಸರ್ಕಾರ ಬರಲಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗಾಗಿ 10 ಸಾವಿರ ಮನೆಯನ್ನು ನಿರ್ಮಾಣ ಮಾಡುತ್ತೇವೆ’ ಎಂದರು. ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ರಾಜ್ಯದಲ್ಲಿ 120 ಕ್ಕಿಂತ ಅಧಿಕ ಸ್ಥಾನಗಳು ಬಿಜೆಪಿಗೆ ಬರಲಿದ್ದು, ಬಹುಮತದ ಬಿಜೆಪಿ ಸರ್ಕಾರ ಬಂದೇ ಬರುತ್ತದೆ. ಗ್ಯಾರಂಟಿ ಕಾರ್ಡು ಹಂಚುತ್ತಿರುವ ಕಾಂಗ್ರೆಸ್ ಪಕ್ಷಕ್ಕೇ ಗ್ಯಾರಂಟಿ ಇಲ್ಲ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತು ಸೋಮಣ್ಣ ಗೆಲುವು ನಿಶ್ಚಿತ. ಇಂದು ನರೇಂದ್ರ ಮೋದಿಯ ಆಡಳಿತದಿಂದಾಗಿ ಜಗತ್ತು ಭಾರತವನ್ನು ಕೊಂಡಾಡುತ್ತಿದೆ. ಗರೀಬಿ ಹಠಾವೋ, ಕಿಸಾನ್ ಸಮ್ಮಾನ್, ಶೌಚಾಲಯಕ್ಕೆ ಆಧ್ಯತೆ, ಕೋವಿಡ್‍ನಿಂದ ರಕ್ಷಣೆ ಮಾಡಿದ್ದು ನರೇಂದ್ರ ಮೋದಿಯವರು. ದೇಶದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲೆಡೆ ಬಿಜೆಪಿ ಜಯಗಳಿಸುವ ಅಗತ್ಯವಿದೆ ಎಂದರು.

ಪಕ್ಷದ ಅಭ್ಯರ್ಥಿ, ಶಾಸಕ ಹರೀಶ್ ಪೂಂಜ ಮಾತನಾಡಿ, ‘ತಾಲ್ಲೂಕಿಗೆ ನೆರೆ, ಕೊರೊನಾ ಬಾಧಿಸಿದ ಸಂದರ್ಭದಲ್ಲಿ ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ. ತಾಲ್ಲೂಕು, ಜಿಲ್ಲೆಯ ಹಿಂದೂ ಬಾಂಧವರು ಕಷ್ಟಕ್ಕೆ ಒಳಗಾದಾಗ ರಾತ್ರಿ ಹಗಲು ಎನ್ನದೆ ಕೆಲಸ ಮಾಡಿದ್ದೇನೆ. ಕೋಮು ಗಲಭೆ, ದೊಂಬಿ ಗಲಾಟೆ ಆಗದಂತೆ ಸಾಮರಸ್ಯದಿಂದ ಐದು ವರ್ಷ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ, 718 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ, ಉಜಿರೆ ಬೆಳಾಲು ರಸ್ತೆಯ ನಿನ್ನಿಕಲ್ಲು ಬಳಿ 116 ಎಕ್ರೆ ಭೂ ಪ್ರದೇಶವನ್ನು ಕೈಗಾರಿಕಾ ವಲಯವಾಗಿ ಮಾಡಿ ತಾಲ್ಲೂಕಿನ 2500 ಜನರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago