ಬೆಳ್ತಂಗಡಿ: ಬೈಕ್ ಒಂದು ಡಿವೈಡರಿಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23ರಂದು ನಡೆದಿದೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ಉಜಿರೆಯ ಖಾಸಗಿ ಕಾಲೇಜಿನ ಮೆಕ್ಯಾನಿಕಲ್ ಡಿಪ್ಲೊಮಾ ವಿದ್ಯಾರ್ಥಿ ದೀಕ್ಷಿತ್ (20) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಕಾಲೇಜಿನಲ್ಲಿ ಸ್ಪೋರ್ಟ್ಸ್ ಡೇ ಕಾರ್ಯಕ್ರಮ ಇದ್ದ ಕಾರಣ ದೀಕ್ಷಿತ್ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವ ವೇಳೆ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಕಾರಣ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಬೈಕ್ ಮಗುಚಿದ್ದು, ದೀಕ್ಷಿತ್ ತಲೆಗೆ ಗಂಭೀರ ಗಾಯಗಳಾಗಿದ್ದವು. ಉಜಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ದೀಕ್ಷಿತ್ ಸಾವನ್ನಪ್ಪಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…