Featured

ಬೆಳ್ತಂಗಡಿ : ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವ ಎಂಜಿನಿಯರ್ ರಸ್ತೆ ಅಪಘಾತಕ್ಕೆ ಬಲಿ -Vishwanews24

ಬೆಳ್ತಂಗಡಿ : ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವ ಎಂಜಿನಿಯರ್ ರಸ್ತೆ ಅಪಘಾತಕ್ಕೆ ಬಲಿ -Vishwanews24

ಬೆಳ್ತಂಗಡಿ, : ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವ ಎಂಜಿನಿಯರ್ ಒಬ್ಬರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಗ್ಗೆ ತಾಲೂಕಿನ ಮಾಲಾಡಿ ಸಮೀಪ ಅರ್ಕುಲ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ಬಾಂಬಿಲ ಸನಿಹದ ಮದ್ದ ನಿವಾಸಿ ಮಾಝಿನ್ (26) ಎಂಬವರೇ ಮೃತಪಟ್ಟವರು.

ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ : ಪ್ರಮೋದ ಮುತಾಲಿಕ್ -Vishwanews24

ಬೆಳ್ತಂಗಡಿ ತಾಲೂಕಿನ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ಇವರ ಬೈಕಿಗೆ ಯಾವುದೋ‌ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಯಲ್ಲಿ ಬೈಕ್ ಉರುಳಿ, ಅದರ ಪಕ್ಕದಲ್ಲೇ ವ್ಯಕ್ತಿಯೊಬ್ಬರು ಬಿದ್ದಿರುವುದನ್ನು ಕಂಡ ಸ್ಥಳೀಯರು ‌ತಕ್ಷಣ ಗಾಯಾಳುವನ್ನು ಬೆಳ್ತಂಗಡಿ ಸರಕಾರಿ‌ ಆಸ್ಪತ್ರೆಗೆ ರವಾನಿಸಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮದ್ದಡ್ಕದಲ್ಲಿ ತನ್ನದೇ ಕಚೇರಿ ಉದ್ಘಾಟನೆಯ ಎಲ್ಲಾ ತಯಾರಿ ಮುಗಿಸಿಕೊಂಡಿದ್ದ ಮಾಝಿನ್ ಅತಿಥಿಗಳು ಆಗಮಿಸುವ ಮುನ್ನ ವಸ್ತ್ರ ಬದಲಾಯಿಸಿ ಬರಲೆಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಮೃತರ ಸ್ನೇಹಿತರು ಮಾಹಿತಿ‌ ನೀಡಿದ್ದಾರೆ.

ಪೂಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

14 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago