ಬೆಳ್ತಂಗಡಿ :ತರಕಾರಿ ಸಾಗಾಟ ವಾಹನದಲ್ಲಿ ಅಕ್ರಮ ಗೋ ಸಾಗಾಟ – 15ಕ್ಕೂ ಅಧಿಕ ಹಸುಗಳ ರಕ್ಷಣೆ – vishwanews24
ಬೆಳ್ತಂಗಡಿ :ತರಕಾರಿ ಸಾಗಾಟ ವಾಹನದಲ್ಲಿ ಅಕ್ರಮ ಗೋ ಸಾಗಾಟ – 15ಕ್ಕೂ ಅಧಿಕ ಹಸುಗಳ ರಕ್ಷಣೆ ; ಚಾಲಕ ಪರಾರಿ
ಬೆಳ್ತಂಗಡಿ : ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ತಡೆಹಿಡಿಯಲಾಗಿದೆ.
ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಗೋವುಗಳನ್ನು ವಧೆಗೆಂದು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಲಪಂಥೀಯ ಸಂಘಟನೆಯ ಸದಸ್ಯರು ವಾಹನವನ್ನು ಹಿಂಬಾಲಿಸಿ ತಡೆಹಿಡಿದಿದ್ದಾರೆ.
ಘಟನೆಯಲ್ಲಿ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ವಾಹನ ಮತ್ತು 15 ಕ್ಕೂ ಹೆಚ್ಚು ಜಾನುವಾರುಗಳನ್ನು ವಶಕ್ಕೆ ಪಡೆದರು.
