ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹರಕೆ ಗಂಟೆಗಳ ಮಾರಾಟದಲ್ಲಿ 1 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಅಧಿವೇಶನದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನೀಡಿದ ಉತ್ತರಕ್ಕೂ, ತಮಗೆ ಸಿಕ್ಕಿದ ಪಟ್ಟಿಯ ದಿನಾಂಕದಲ್ಲೂ ವ್ಯತ್ಯಾಸ ಇದೆ ಅಂತ ಶಾಸಕರು ಗುಡುಗಿದರು.ಅಲ್ಲದೆ ಹರಾಜು ಪಟ್ಟಿಯಲ್ಲಿ ಸಂಪೂರ್ಣ ಬದಲಾವಣೆಗಳು ಇದೆ ಅಂತ ಹೇಳಿ ಸಭಾಧ್ಯಕ್ಷರ ಗಮನಕ್ಕೆ ತಂದರು.
ಕರಾವಳಿಯ ಶಾಸಕ ಹರೀಶ್ ಪೂಂಜಾ, ಸದ್ರಿ ಪ್ರಕರಣದಲ್ಲಿ ದೇವಳದ ಆಡಳಿತಾಧಿಕಾರಿ ಮತ್ತು ಆಡಳಿತ ಮಂಡಳಿಯವರು ಸೇರಿಕೊಂಡು ಭಾರಿ ದೊಡ್ಡ ಮಟ್ಟದ ಅವ್ಯವಹಾರ ನಡೆಸಿದ್ದಾರೆ ಅಂತ ಆರೋಪಿಸಿದರು.ಮಾತ್ರವಲ್ಲದೆ ತಕ್ಷಣ ಆಡಳಿತಾಧಿಕಾರಿಯನ್ನು ಅಮಾನತು ಮಾಡಬೇಕು ಹಾಗೂ ಇಡೀ ಪ್ರಕರಣವನ್ನು ಕಮಿಷನರೇಟ್ ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್ ಅಶೋಕ್, ಯಾರೇ ತಪ್ಪು ಮಾಡಿದ್ರು ಅದು ತಪ್ಪೇ, ಆದ್ದರಿಂದ ಆಡಳಿತ ಮಂಡಳಿಗೆ ಸೂಕ್ತ ನೋಟೀಸ್ ಕೊಟ್ಟು ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು…
ಬೆಳ್ತಂಗಡಿಯ ಸಮಸ್ಯೆಗಳನ್ನು ಪ್ರತೀ ಬಾರಿ ವಿಧಾನ ಸಭೆಯಲ್ಲಿ ಚರ್ಚಿಸುವ ಮೂಲಕ ಶಾಸಕ ಹರೀಶ್ ಪೂಂಜಾ ಜನರ ಸಮಸ್ಯೆಗಳಿಗೆ ಸ್ಪಂದಿಸುವುದರಲ್ಲಿ ಒಂದು ಹೆಜ್ಜೆ ಮುಂದೆ ಇರ್ತಾರೆ ಅನ್ನೋದಕ್ಕೆ ಈ ನಿದರ್ಶನವೇ ಸಾಕ್ಷಿಯಾಗಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…