ಬೆಳ್ತಂಗಡಿ: ಭಾರೀ ಸಿಡಿಲೊಂದು ಬಡಿದು ತೆಂಗಿನಮರ ಸುಟ್ಟಿರುವ ಘಟನೆ ಇಲ್ಲಿನ ಸನಿಹದ ಪೆಟ್ರೋಲ್ ಪಂಪ್ನ ಬಳಿ ಮಂಗಳವಾರ ನಡೆದಿದೆ.
ಸಂಜೆ 3ರ ಬಳಿಕ ಏಕಾಏಕಿ ಮಳೆ ಸಿಡಿಲು ಮಿಂಚು ಆವರಿಸಿತ್ತು. ಸುಮಾರು 4 ಗಂಟೆ ಸಮಯಕ್ಕೆ ಸಿಡಿಲು ತೆಂಗಿನ ಮರಕ್ಕೆ ಬಡಿದ ಪರಿಣಾಮ ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿದಿತ್ತು. ಸಮೀಪದಲ್ಲೆ ಪೆಟ್ರೋಲ್ ಬಂಕ್ ಇದ್ದು ಸ್ಥಳದಲ್ಲಿದ್ದವರಿಗೆ ವಿದ್ಯುತ್ ಸ್ಪರ್ಶದ ಅನುಭವವಾಗಿದೆ. ಪೆಟ್ರೋಲ್ ಬಂಕ್ ಪಂಪ್ ಕೈಕೊಟ್ಟಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಆದರೆ ಯಾವುದೇ ಹಾನಿ ಸಂಭವಿಸಿಲ್ಲ. ಮಳೆ ಹೆಚ್ಚಾದ್ದರಿಂದ ಬೆಂಕಿ ತನ್ನಿಂತಾನೆ ಆರಿದೆ. ತಾಲೂಕಿನ ಕಾಯರ್ತಡ್ಕ ಸೇರಿದಂತೆ ಕೆಲ ಪ್ರದೇಶಗಳಲ್ಲಿ ನೀರು ನಿಂತಿದ್ದರಿಂದ ರಸ್ತೆ ಜಲಾವೃತವಾಗಿತ್ತು. ಸಂಜೆಯಾಗುತ್ತಲೆ ಸಿಡಿಲು ಗುಡುಗು ಹೆಚ್ಚಾಗಿತ್ತು.
ಕಳೆದ ಒಂದು ವಾರದಿಂದೀಚೆಗೆ ತಾಲೂಕಿನಲ್ಲಿ ಬೆಳಗಿನಿಂದ ಸಂಜೆಯವರೆಗೆ ಬಿಸಿಲಿನ ಧಗೆ ಬಳಿಕ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿರುವುದು ಮಾಮೂಲಾಗಿದೆ.
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…