ಬೆಳ್ತಂಗಡಿ: ಭಾರೀ ಸಿಡಿಲೊಂದು ಬಡಿದು ತೆಂಗಿನಮರ ಸುಟ್ಟಿರುವ ಘಟನೆ ಇಲ್ಲಿನ ಸನಿಹದ ಪೆಟ್ರೋಲ್ ಪಂಪ್ನ ಬಳಿ ಮಂಗಳವಾರ ನಡೆದಿದೆ.
ಸಂಜೆ 3ರ ಬಳಿಕ ಏಕಾಏಕಿ ಮಳೆ ಸಿಡಿಲು ಮಿಂಚು ಆವರಿಸಿತ್ತು. ಸುಮಾರು 4 ಗಂಟೆ ಸಮಯಕ್ಕೆ ಸಿಡಿಲು ತೆಂಗಿನ ಮರಕ್ಕೆ ಬಡಿದ ಪರಿಣಾಮ ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿದಿತ್ತು. ಸಮೀಪದಲ್ಲೆ ಪೆಟ್ರೋಲ್ ಬಂಕ್ ಇದ್ದು ಸ್ಥಳದಲ್ಲಿದ್ದವರಿಗೆ ವಿದ್ಯುತ್ ಸ್ಪರ್ಶದ ಅನುಭವವಾಗಿದೆ. ಪೆಟ್ರೋಲ್ ಬಂಕ್ ಪಂಪ್ ಕೈಕೊಟ್ಟಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಆದರೆ ಯಾವುದೇ ಹಾನಿ ಸಂಭವಿಸಿಲ್ಲ. ಮಳೆ ಹೆಚ್ಚಾದ್ದರಿಂದ ಬೆಂಕಿ ತನ್ನಿಂತಾನೆ ಆರಿದೆ. ತಾಲೂಕಿನ ಕಾಯರ್ತಡ್ಕ ಸೇರಿದಂತೆ ಕೆಲ ಪ್ರದೇಶಗಳಲ್ಲಿ ನೀರು ನಿಂತಿದ್ದರಿಂದ ರಸ್ತೆ ಜಲಾವೃತವಾಗಿತ್ತು. ಸಂಜೆಯಾಗುತ್ತಲೆ ಸಿಡಿಲು ಗುಡುಗು ಹೆಚ್ಚಾಗಿತ್ತು.
ಕಳೆದ ಒಂದು ವಾರದಿಂದೀಚೆಗೆ ತಾಲೂಕಿನಲ್ಲಿ ಬೆಳಗಿನಿಂದ ಸಂಜೆಯವರೆಗೆ ಬಿಸಿಲಿನ ಧಗೆ ಬಳಿಕ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿರುವುದು ಮಾಮೂಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…