Featured

ಬೆಳ್ತಂಗಡಿ: ದಲಿತ ನಾಯಕ ಡೀಕಯ್ಯ ಸಂಶಯಾಸ್ಪದ ಸಾವು :  ಸಿಒಡಿ ತನಿಖೆ ರಾಜ್ಯ ಸರಕಾರ ಆದೇಶ – Vishwanews24

ಬೆಳ್ತಂಗಡಿ: ದಲಿತ ನಾಯಕ ಡೀಕಯ್ಯ ಸಂಶಯಾಸ್ಪದ ಸಾವು :  ಸಿಒಡಿ ತನಿಖೆ ರಾಜ್ಯ ಸರಕಾರ ಆದೇಶ

ಬೆಳ್ತಂಗಡಿ : ಸಮಾಜ ಪರಿವರ್ತನಾ ಚಳವಳಿಯ ನಾಯಕ, ಅಂಬೇಡ್ಕರ್‌ವಾದಿ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ.

ಕಳೆದ ಜುಲೈ 6ರಂದು ಮನೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯ ತನ್ನ ಮನೆಯಲ್ಲಿ ಪಿ. ಡೀಕಯ್ಯ ಕುಸಿದು ಬಿದ್ದಿದ್ದರು. ತಲೆಗೆ ಗಾಯಗೊಂಡ ಸ್ಥಿತಿಯಲ್ಲಿದ್ದ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎರಡು ದಿನಗಳ ಬಳಿಕ ಅವರು ಮೃತಪಟ್ಟಿದ್ದರು.

ಮನೆಯವರ ಒಪ್ಪಿಗೆಯಂತೆ ಅಂಗಾಂಗಗಳ ದಾನ ಮಾಡಿದ ಬಳಿಕ ಜು. 9ರಂದು ಬೌದ್ಧ ಧರ್ಮದ ಪ್ರಕಾರ ಕಣಿಯೂರು ಗ್ರಾಮದ ಪದ್ಮುಂಜ ಬಳಿಯ ಪೊಯ್ಯದ ಮೂಲ ಮನೆಗೆ ತಂದು ದಫನ ಮಾಡಲಾಗಿತ್ತು.

ಇಂದಿನಿಂದ ಬಿಜೆಪಿ ಜನಸಂಪರ್ಕ ಸಭೆ ಪುನರಾರಂಭ.. ಉಡುಪಿಯಲ್ಲೂ ಜನ ಸಂಕಲ್ಪ ಯಾತ್ರೆ – Vishwanews24

ಆದರೆ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ಮೃತರ ತಾಯಿಯ ಕುಟುಂಬಸ್ಥರ ಪರವಾಗಿ ಡೀಕಯ್ಯ ಅವರ ಸಹೋದರಿಯ ಗಂಡ ಪದ್ಮನಾಭ ಎಂಬವರು ಜು.15 ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು.ಹೀಗಾಗಿ ಜು. 18ರಂದು ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ಶವವನ್ನು ಹೊರತೆಗೆದು ವೈದ್ಯರಿಂದ ಶವ ಪರೀಕ್ಷೆ ಮಾಡಲಾಗಿತ್ತು.

ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿದ ಬೆಳ್ತಂಗಡಿ ಪೋಲಿಸರು ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದರು. ಈ ಮಧ್ಯೆ ಡೀಕಯ್ಯ ಅವರ ಕುಟುಂಬಸ್ಥರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಒಡಿ ತನಿಖೆಗೆ ಒತ್ತಾಯಿಸಿದ್ದರು. ಇದೀಗ ನ. 4ರಂದು ಘಟನೆಯ ಬಗ್ಗೆ ರಾಜ್ಯ ಸರಕಾರ ಸಿಒಡಿ ತನಿಖೆಗೆ ಆದೇಶಿಸಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಿಂದ ಪ್ರಕರಣದ ದಾಖಲೆಗಳನ್ನು ಸಿಒಡಿ ಇಲಾಖೆಗೆ ಒಪ್ಪಿಸುವಂತೆ ಆದೇಶಿಸಿದೆ.

ಶಿವಮೊಗ್ಗ: ಬೈಕ್-ಕಾರು ಮುಖಾಮುಖಿ ಢಿಕ್ಕಿ : ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago