Featured

ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಬರುವ ಟೀಕೆಗಳ ಬಗ್ಗೆ ಯಾವುದೇ ಭಯ ಬೇಡ : ಡಿ.ಕೆ ಶಿವಕುಮಾರ್ – vishwanews24

ದೇವಸ್ಥಾನ ಟೀಕಿಸುವವರ ಬಗ್ಗೆ  ಹೆಗ್ಗಡೆಯವರು ಅಂಜಬೇಕಾಗಿಲ್ಲ, ನಿಮ್ಮ ಜೊತೆ ನಾವಿದ್ದೇವೆ

ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಬರುವ ಟೀಕೆಗಳ ಬಗ್ಗೆ ಯಾವುದೇ ಭಯ ಬೇಡ. ಟೀಕೆಗಳು ಸಾಯುತ್ತವೆ ನಾವು ಮಾಡುವ ಕಾರ್ಯಗಳು ಉಳಿಯುತ್ತವೆ. ಯಾವುದಕ್ಕೂ ಅಂಜುವ ಸಂದರ್ಭವೇ ಇಲ್ಲ. ನನ್ನತಂಹ ನೂರಾರು ಡಿಕೆ ಶಿವಕುಮಾರ್ ಗಳು ನಿಮ್ಮ ಹಿಂದೆ ನಿಲ್ಲಲು ಸಿದ್ದರಿದ್ದಾರೆ ಎಂದು ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಕಲ್ಯಾಣ ಮಂಟಪಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಧರ್ಮಸ್ಥಳದಲ್ಲಿ ನಿತ್ಯವೂ ನಡೆಯುತ್ತಿರುವ ಅನ್ನದಾನ, ವಿದ್ಯಾದಾನ, ಔಷಧಿ ದಾನ ಮತ್ತು ಅಭಯದಾನ ಎಂಬ ಚತುರ್ದಾನಗಳು ದೇಶದ ಇತಿಹಾಸದಲ್ಲೇ ಸುವರ್ಣಾಕ್ಷರಗಳಿಂದ ಬರೆಯಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಟೀಕೆ ಮಾಡುವುದು ಸುಲಭ. ಹೆಗ್ಗಡೆಯವರು ಜೈನರು, ದೇವಸ್ಥಾನ ಹಿಂದೂ ದೇವಸ್ಥಾನ ಎಂದು ಟೀಕಿಸುವವರನ್ನು ಖಂಡಿಸಿದ ಡಿ.ಕೆ.ಶಿ, ಇದಕ್ಕೆ ಹೆಗ್ಗಡೆಯವರು ಅಂಜಬೇಕಾಗಿಲ್ಲ, ಅಳುಕಬೇಕಾಗಿಲ್ಲ. ನಿಮ್ಮ ಜೊತೆ ನಾವಿದ್ದೇವೆ. ತಮ್ಮ ಹಾಗೂ ಕ್ಷೇತ್ರ ರಕ್ಷಣೆಗೆ ನಾವೆಲ್ಲ ಸಿದ್ಧರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

15 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

24 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

39 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

53 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago