ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕಾರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ಆ.9ರ ಸೋಮವಾರ ನಡೆದಿದೆ.
ಬೆಳ್ಳಂಬೆಳಗ್ಗೆ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ದೌಡಾಯಿಸಿದ್ದು, ಅವರೊಂದಿಗೆ ಜಿಲ್ಲೆಯ ಶಾಸಕರಾದ ರಾಜೇಶ್ ನಾಯಕ್, ಭರತ್ ಶೆಟ್ಟಿ, ಭಾಗೀರಥಿ ಮುಳ್ಯ, ಉಮಾನಾಥ್ ಕೋಟ್ಯಾನ್, ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಸಾತ್ ನೀಡಿದರು.
ಸ್ಥಳದಲ್ಲಿ ನೂರಾರು ಪೊಲೀಸರು, ಸ್ಥಳೀಯರು, ಅರಣ್ಯ ಇಲಾಖೆ ಸಿಬಂದಿ ಜಮಾಯಿಸಿ ತಾತ್ಕಾಲಿಕವಾಗಿ ನಿರ್ಮಿಸಿದ ಮನೆ ತೆರವಿಗೆ ಅರಣ್ಯ ಇಲಾಖೆ ದಿಬಂದಿ ಮುಂದಾಗಿದ್ದಾರೆ. ಇದನ್ನು ತಡೆದ ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಅವರನ್ನು ಲೆಕ್ಕಿಸದೆ ಎಸಿಎಫ್ ಸುಬ್ಬಯ್ಯ ನಾಯ್ಕ್ ಹಾಗೂ ಉಪ್ಪಿನಂಗಡಿ ವಲಯ ಅರಣ್ಯಧಿಕಾರಿ ಜಯಪ್ರಕಾಶ್ ತಳ್ಳಾಡ ನಡೆಸಿದರಲ್ಲದೆ ಹಲ್ಲೆಗೆ ಮುಂದಾದ ಘಟನೆ ನಡೆಯಿತು.
ಕಳೆದ ಅ.6 ರಂದು ಅರಣ್ಯ ಇಲಾಖೆ ನೂತನ ಮನೆ ನಿರ್ಮಾಣಕ್ಕೆ ಮುಂದಾದ ಕುಟುಂಬದ ಫೌಂಡೇಶನ್ ಕಿತ್ತೆಸೆದು ಅರಣ್ಯ ಇಲಾಖೆ ದರ್ಪ ತೋರಿತ್ತು. ಇದನ್ನು ಪ್ರಶ್ನಿಸಿದ ಶಾಸಕರ ವಿರುದ್ಧವೇ ಹಗೆ ಸಾಧನೆ ಮಾಡುತ್ತಿರುವ ಅರಣ್ಯ ಇಲಾಖೆ ಸಚಿವರ ಆದೇಶ ಇದೆ ಎಂದು ಸುಳ್ಳು ಹೇಳಿ ಇಂದು ತೆರವಿಗೆ ಮುಂದಾಗಿತ್ತು. ಇದಕ್ಕೂ ಮುನ್ನ ಮನೆ ಮಂದಿ ಹಾಗೂ ಸ್ಥಳೀಯರು ಸೇರಿ 10 ಮಂದಿ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಪ್ರಕರಣವು ರಾಜಕೀಯ ಬಣ್ಣ ಪಡೆಯುತ್ತಿದ್ದು, ಅರಣ್ಯಧಿಕಾರಿಗಳಿಗೆ ಮನೆ ತೆರವುಗೊಳಿಸುವಂತೆ ಒತ್ತಡವೂ ಹೇರುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಅರಣ್ಯಧಿಕಾರಿಗಳು ಬಡವರ ಮನೆ ತೆರವುಗೊಳಿಸಿಯೇ ಸಿದ್ಧ ಎಂದು ಹಟಕ್ಕೆ ಬಿದ್ದಿದೆ. ತೆರವುಗೊಳಿಸುವುದಾದರೆ ಅರಣ್ಯ ಮತ್ತು ಕಂದಾಯ ಜಂಟಿ ಸರ್ವೇ ನಡೆಸಿ ತೆರವುಗೊಳಿಸಿ ಎಂದು ಶಾಸಕರು ಆಗ್ರಹಿಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಕೆ.ಎಸ್.ಆರ್.ಪಿ.ಯ ವಿಶೇಷ ಪಡೆಯನ್ನು ನಿಯೋಜಿಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…