ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕಾರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ಆ.9ರ ಸೋಮವಾರ ನಡೆದಿದೆ.
ಬೆಳ್ಳಂಬೆಳಗ್ಗೆ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ದೌಡಾಯಿಸಿದ್ದು, ಅವರೊಂದಿಗೆ ಜಿಲ್ಲೆಯ ಶಾಸಕರಾದ ರಾಜೇಶ್ ನಾಯಕ್, ಭರತ್ ಶೆಟ್ಟಿ, ಭಾಗೀರಥಿ ಮುಳ್ಯ, ಉಮಾನಾಥ್ ಕೋಟ್ಯಾನ್, ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಸಾತ್ ನೀಡಿದರು.
ಸ್ಥಳದಲ್ಲಿ ನೂರಾರು ಪೊಲೀಸರು, ಸ್ಥಳೀಯರು, ಅರಣ್ಯ ಇಲಾಖೆ ಸಿಬಂದಿ ಜಮಾಯಿಸಿ ತಾತ್ಕಾಲಿಕವಾಗಿ ನಿರ್ಮಿಸಿದ ಮನೆ ತೆರವಿಗೆ ಅರಣ್ಯ ಇಲಾಖೆ ದಿಬಂದಿ ಮುಂದಾಗಿದ್ದಾರೆ. ಇದನ್ನು ತಡೆದ ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಅವರನ್ನು ಲೆಕ್ಕಿಸದೆ ಎಸಿಎಫ್ ಸುಬ್ಬಯ್ಯ ನಾಯ್ಕ್ ಹಾಗೂ ಉಪ್ಪಿನಂಗಡಿ ವಲಯ ಅರಣ್ಯಧಿಕಾರಿ ಜಯಪ್ರಕಾಶ್ ತಳ್ಳಾಡ ನಡೆಸಿದರಲ್ಲದೆ ಹಲ್ಲೆಗೆ ಮುಂದಾದ ಘಟನೆ ನಡೆಯಿತು.
ಕಳೆದ ಅ.6 ರಂದು ಅರಣ್ಯ ಇಲಾಖೆ ನೂತನ ಮನೆ ನಿರ್ಮಾಣಕ್ಕೆ ಮುಂದಾದ ಕುಟುಂಬದ ಫೌಂಡೇಶನ್ ಕಿತ್ತೆಸೆದು ಅರಣ್ಯ ಇಲಾಖೆ ದರ್ಪ ತೋರಿತ್ತು. ಇದನ್ನು ಪ್ರಶ್ನಿಸಿದ ಶಾಸಕರ ವಿರುದ್ಧವೇ ಹಗೆ ಸಾಧನೆ ಮಾಡುತ್ತಿರುವ ಅರಣ್ಯ ಇಲಾಖೆ ಸಚಿವರ ಆದೇಶ ಇದೆ ಎಂದು ಸುಳ್ಳು ಹೇಳಿ ಇಂದು ತೆರವಿಗೆ ಮುಂದಾಗಿತ್ತು. ಇದಕ್ಕೂ ಮುನ್ನ ಮನೆ ಮಂದಿ ಹಾಗೂ ಸ್ಥಳೀಯರು ಸೇರಿ 10 ಮಂದಿ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಪ್ರಕರಣವು ರಾಜಕೀಯ ಬಣ್ಣ ಪಡೆಯುತ್ತಿದ್ದು, ಅರಣ್ಯಧಿಕಾರಿಗಳಿಗೆ ಮನೆ ತೆರವುಗೊಳಿಸುವಂತೆ ಒತ್ತಡವೂ ಹೇರುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಅರಣ್ಯಧಿಕಾರಿಗಳು ಬಡವರ ಮನೆ ತೆರವುಗೊಳಿಸಿಯೇ ಸಿದ್ಧ ಎಂದು ಹಟಕ್ಕೆ ಬಿದ್ದಿದೆ. ತೆರವುಗೊಳಿಸುವುದಾದರೆ ಅರಣ್ಯ ಮತ್ತು ಕಂದಾಯ ಜಂಟಿ ಸರ್ವೇ ನಡೆಸಿ ತೆರವುಗೊಳಿಸಿ ಎಂದು ಶಾಸಕರು ಆಗ್ರಹಿಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಕೆ.ಎಸ್.ಆರ್.ಪಿ.ಯ ವಿಶೇಷ ಪಡೆಯನ್ನು ನಿಯೋಜಿಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…