ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು ತೆರಳಿದ್ದ ವೇಳೆ, ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಈ ದುರ್ಘಟನೆ ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಇವರು ಉಜಿರೆಯ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳೀಯರು ನದಿಯಲ್ಲಿ ಯುವಕನ ಮೃತದೇಹ ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಿದರು. ಸ್ಥಳೀಯ ನಿವಾಸಿಗಳು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಸ್ಥಳಕ್ಕೆ ಧಾವಿಸಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದರು.
ಕೊನೆಗೆ ರಾತ್ರಿ 9:30ರ ಸುಮಾರಿಗೆ ಯುವಕನ ಶವ ನದಿಯಲ್ಲಿ ಪತ್ತೆಯಾಗಿದ್ದು, ಹೊರತೆಗೆಯಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯ ಉಪನಿರೀಕ್ಷಕ (ಎಸ್ಐ) ಸಮರ್ಥ್ ಆರ್. ಗಾಣಿಗೇರ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…