Featured

ಬೆಳ್ತಂಗಡಿ  : ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು – vishwanews24

ಬೆಳ್ತಂಗಡಿ  : ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

ಮಂಗಳೂರು: ಪಟಾಕಿ ಗೋಡೌನ್  ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರು  ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ  ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಅವಘಡ ಸಂಭವಿಸಿದೆ. ಬಶೀರ್ ಎಂಬವರ ಜಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿದ್ದಾರೆ. ಘಟನೆಯಲ್ಲಿ ಕೇರಳ ನಿವಾಸಿಗಳಾದ ಸ್ವಾಮಿ (55) ಹಾಗೂ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್ (25) ಮೃತಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ.

ಇನ್ನು ಘಟನೆಯಲ್ಲಿ 6 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಿನೇಶ್, ಕಿರಣ್, ಕುಮಾರ್, ಕಲ್ಲೇಶ್, ಪ್ರೇಮ್ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಕುಟ್ಟೋಡಿ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಕೆ ಮಾಡುತ್ತಿದ್ದು, ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಪಟಾಕಿ ಕಾರ್ಖಾನೆ ಮೇಲೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಈ ಘಟನೆ ಭಾನುವಾರ ಸಂಜೆ ಸುಮಾರು 5:30ರ ಸುಮಾರಿಗೆ ನಡೆದಿದೆ. 50 ಸೆನ್ಸ್ ಜಾಗದಲ್ಲಿ ಸಯ್ಯದ್ ಬಶೀರ್ ಎಂಬವರು ಪಟಾಕಿ ಮಾಡಲು ಲೈಸೆನ್ಸ್ ಪಡೆದಿದ್ದಾರೆ. 2011-2012 ನಲ್ಲಿ ತೆಗೆದುಕೊಂಡಿರುವ ಲೈಸೆನ್ಸ್ 2019ರಲ್ಲಿ ರಿನಿವಲ್ ಆಗಿದೆ. 2024ರ ಮಾರ್ಚ್ವರೆಗೂ ವ್ಯಾಲಿಡ್ ಆಗಿದೆ. ಡಿಮ್ಯಾಂಡ್‌ಗೆ ತಕ್ಕ ಹಾಗೆ ಪಟಾಕಿ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪಟಾಕಿ ತಯಾರಿಸುವಾಗ ಯಾವ ಕಾರಣಕ್ಕೆ ಬ್ಲಾಸ್ಟ್ ಆಗಿದೆ ಎಂಬುದು ಗೊತ್ತಾಗಿಲ್ಲ. ಮೊಬೈಲ್ ಫೊರೆನ್ಸಿಕ್ ಟೀಮ್, ಡಿಪಾರ್ಟ್ಮೆಂಟ್ ಆಫ್ ಎಕ್ಸ್‌ಪ್ಲೋಸಿವ್‌ ತಂಡ ಬಂದಿದೆ. ಘಟನೆ ಹೇಗಾಯಿತು? ಯಾಕಾಯ್ತು ಎಂಬ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಮಾತನಾಡಿದ ಅವರು, ಈ ಘಟನೆಗೆ ಕಾರಣ ಏನು ಎಂಬ ಬಗ್ಗೆ ಗಂಭೀರ ತನಿಖೆ ನಡೆಯಬೇಕಿದೆ. ಪರವಾನಿಗೆ ನೀಡಿದರ ಬಗ್ಗೆ ಸರ್ಕಾರ ಗಂಭೀರ ತನಿಖೆ ಮಾಡಬೇಕು. ಸ್ಫೋಟದ ತೀವ್ರತೆ ಹಲವು ಅನುಮಾನಗಳನ್ನು ಸೃಷ್ಟಿಸಿದೆ. ಈ ಪ್ರಕರಣವನ್ನು ರಾಷ್ಟೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ಘಟನೆ ಬಹಳ ಭೀಕರವಾಗಿ ನಡೆದಿದೆ. ಈ ಘಟನೆ ಬಗ್ಗೆ ಅನುಮಾನವಿದೆ. ಮೂವರು ಬಲಿಯಾಗಿದ್ದಾರೆ. ದೊಡ್ಡದಾದ ಸ್ಫೋಟಕ ವಸ್ತುಗಳ ಸ್ಫೋಟವಾಗಿದೆ. ಸ್ಥಳೀಯ ಮನೆಗಳಿಗೆ ಸರ್ಕಾರ ಸಂಪೂರ್ಣ ಪರಿಹಾರ ಕೊಡಬೇಕು. ಬಲಿಯಾದ ಕಾರ್ಮಿಕ ಕುಟುಂಬಗಳಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದ್ದು, ಈ ಪ್ರಕರಣವನ್ನು ಎನ್‌ಐಎಗೆ ವಹಿಸಿ ಸಮಗ್ರ ತನಿಖೆ ಮಾಡಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ. ತಕ್ಷಣವೇ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಈ ಸ್ಫೋಟದ ಹಿಂದೆ ಯಾವುದಾದ್ರು ವ್ಯವಸ್ಥೆಯ ನಂಟಿದೆಯಾ ಅನ್ನೋದನ್ನು ನೋಡಬೇಕು. ಈ ಸ್ಫೋಟಕ್ಕೆ ಸಂಬಂಧಪಟ್ಟವರನ್ನು ತಕ್ಷಣ ಬಂಧಿಸಿ ಎಂದು ಒತ್ತಾಯಿಸಿದರು

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 day ago