ಬೆಳ್ತಂಗಡಿ: ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದು ಶೌಚಾಲಯದೊಳಗೆ ಮೃತದೇಹವನ್ನು ಹಾಕಿದ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಪತಿ ಮನೆಯಲ್ಲಿ ವಾಸವಿದ್ದ, ಮೂಲತಃ ಪುತ್ತೂರಿನ ನಿವಾಸಿ ತಸ್ಲಿಮಾ (23)ಕೊಲೆಯಾದ ಪತ್ನಿ. ತಸ್ಲಿಮಾಳ ಮೃತದೇಹ ಆಕೆಯ ಮನೆಯ ಶೌಚಾಲಯದಲ್ಲಿ ಪತ್ತೆಯಾಗಿದ್ದು, ಪತಿ ಉಮರ್ ಫಾರೂಕ್ ನಾಪತ್ತೆಯಾಗಿದ್ದಾನೆ. ಈಗಾಲೇ ಎರಡು ಮದುವೆಯಾಗಿರುವ ಉಮರ್ ಫಾರೂಕ್ ಕಳೆದ ವರ್ಷ ತಸ್ಲಿಮಾಳನ್ನು ಮೂರನೇ ಮದುವೆಯಾಗಿದ್ದಾನೆ.
ಮೃತ ಮಹಿಳೆ ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಉಮರ್ ಫಾರೂಕ್ ಎಂಬರೊಂದಿಗೆ ವಿವಾಹವಾಗಿದರು. ಈ ಜೋಡಿಗೆ 4 ವರ್ಷದ ಗಂಡು ಮಗು ಮತ್ತು 2 ವರ್ಷದ ಹೆಣ್ಣು ಮಗು ಸೇರಿ ಇಬ್ಬರು ಮಕ್ಕಳಿದ್ದಾರೆ.
ಮಹಿಳೆಯ ಮೃತ ದೇಹ ಶೌಚಾಲಯದಲ್ಲಿ ಪತ್ತೆಯಾಗಿದೆ. ಪ್ರತಿ ದಿನ ರಾತ್ರಿ ಮನೆಯಲ್ಲಿ ಜಗಳವಾಗುತ್ತಿದ್ದು ನಿನ್ನೆಯು ಜಗಳವಾಗುತ್ತಿತ್ತು ಎಂದು ಸ್ಥಳಿಯರು ತಿಳಿಸಿದ್ದಾರೆ.
ಈತನ ವಿರುದ್ದ ಪುಂಜಾಲಕಟ್ಟೆ, ವೇಣೂರು ಸೇರಿದಂತೆ ಬೇರೆ ಜಿಲ್ಲೆಯ ಪೋಲೀಸ್ ಠಾಣೆಯಲ್ಲೂ ಕೂಡ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಹಾಗೂ ಬೆಳ್ತಂಗಡಿ ಎಸ್.ಐ ನಂದಕುಮಾರ್ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…